ಬಜೆಟ್‌ 23-24 | ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆ ಘೋಷಣೆ

Date:

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

- Advertisement -

ಬಜೆಟ್‌ ಭಾಷಣದಲ್ಲಿ ತೋಟಗಾರಿಕೆ ಇಲಾಖೆ ಕುರಿತು ವಿಷಯ ಪ್ರಸ್ತಾಪಿಸಿದ ಅವರು, “ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“2023-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು. ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್‌ ಮಾಡಲು ಕ್ರಮ ವಹಿಸಲಾಗುವುದು” ಎಂದು ಹೇಳಿದರು.

“ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು” ಎಂದರು.

“ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...