ಮಂಡ್ಯ | ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ ‘ ಸೇರಿದ ಅಣ್ಣೂರು ಗ್ರಾಮ ಪಂಚಾಯಿತಿ

Date:

Advertisements

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಹಿಳಾ ಸಬಲೀಕರಣ ಹಾಗೂ ಪಂಚಾಯತ್ ರಾಜ್ ಸಬಲೀಕರಣ ಕುರಿತಾದ ಜಾಗೃತಿ ಅಭಿಯಾನದ ಅಂಗವಾಗಿ ಮನೆಯ ಮುಂದೆ ರಂಗೋಲಿ ಬಿಡಿಸಿ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ ‘ ಸೇರುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.

ಪಂಚಾಯತ್ ರಾಜ್ ಕಾಯ್ದೆಯ 73ನೇ ತಿದ್ದುಪಡಿ ಹಾಗೂ ಏಪ್ರಿಲ್ 24 ರ ಪಂಚಾಯತ್ ರಾಜ್ ದಿನದ ಶುಭಾಶಯಗಳನ್ನು ಕೋರಿ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರ್ಕಹಳ್ಳಿ, ಆಲಭುಜನಹಳ್ಳಿ, ಅಣ್ಣೂರು ಸೇರಿದಂತೆ ಮಹಿಳೆಯರು 1,418 ರಂಗೋಲಿ ಬಿಡಿಸಿದ್ದರು. ಈ ಮೂಲಕ ಅಣ್ಣೂರು ಗ್ರಾಮ ಪಂಚಾಯತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದೆ.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ಮಾತನಾಡಿ ” ಪಂಚಾಯುತ್ ರಾಜ್ ಸಂಸ್ಥೆಗಳ ಅಸ್ವಿತ್ವ ಕಾಣಲು, ಆಡಳಿತದಲ್ಲಿ ಜನರ ಸಹಭಾಗಿತ್ವ ಮುಖ್ಯವಾದದ್ದು. ಆಡಳಿತದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಅವಕಾಶ ದೊರೆತಿದ್ದು ಸಂವಿದಾನದ 73 ನೇ ತಿದ್ದುಪಡಿಯಿಂದ. ಇದರ ಕುರಿತಾಗಿ ಗ್ರಾಮದಲ್ಲಿ ಜನರಿಗೆ ತಿಳಿಯಪಡಿಸಲು ರಂಗೋಲಿ ಬಿಡಿಸುವ ಕಾರ್ಯಕ್ರಮ ಸಹಕಾರಿಯಾಯಿತು ” ಎಂದರು.

Advertisements

ಪಿಡಿಓ ಎಂ. ಆರ್. ಅಶ್ವಿನಿ ಮಾತನಾಡಿ ” ಮಹಿಳಾ ಸಶಕ್ತಿಕರಣ ಅಭಿಯಾನದಡಿ ಸರ್ಕಾರ ಸುತ್ತೋಲೆ ಹೊರಡಿಸಿ ಮಾರ್ಚ್. 8 ರಿಂದ ಜೂನ್. 30 ರ ವರೆಗೆ ಹದಿನಾರು ವಾರಗಳ ಕಾಲ ಮೂವತಕ್ಕೂ ಹೆಚ್ಚು ಕಾರ್ಯಕ್ರಮ ನಡೆಸಲು ಸೂಚಿಸಿತ್ತು. ಅದರಂತೆ, ವಿಶೇಷವಾಗಿ ಕಾರ್ಯಕ್ರಮಗಳನ್ನು ರೂಪಿಸಿದ ಫಲವಾಗಿ ಇಂದು ಇಂತಹ ಸಾಧನೆ ಮಾಡಲು ಸಾಧ್ಯವಾಯಿತು. ಇದಕ್ಕೆಲ್ಲ ಪ್ರಮುಖ ಕಾರಣ ಗ್ರಾಮದ ಮಹಿಳೆಯರು ” ಎಂದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಹಾರೋಹಳ್ಳಿಯಲ್ಲಿ ದಕ್ಷಿಣ ಬುದ್ಧಗಯಾ ಸ್ಮಾರಕ ಸ್ಥಾಪನೆಗೆ ಧಮ್ಮ ಸಂಕಲ್ಪ; ಜಾಗೃತಿ ಸಮಾವೇಶ

ಅಣ್ಣೂರು ಗ್ರಾಮ ಪಂಚಾಯತಿ ವಿಶೇಷ ಸಾಧನೆ ಮಾಡುವ ಮೂಲಕ ದೇಶದಲ್ಲಿಯೇ ಮಾದರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X