ಕುಮಾರಸ್ವಾಮಿಗೆ ಉತ್ತರಿಸುವುದೂ, ಹುಚ್ಚಾಸ್ಪತ್ರೆಗೆ ಸೇರುವುದೂ ಒಂದೇ: ದಿನೇಶ್ ಗುಂಡೂರಾವ್ ವ್ಯಂಗ್ಯ

Date:

Advertisements

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ನಾವು ಉತ್ತರಿಸುವುದೂ, ಹುಚ್ಚಾಸ್ಪತ್ರೆಗೆ ಸೇರುವುದೂ ಎರಡು ಒಂದೇ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬಗ್ಗೆ ಕುಮಾರಸ್ವಾಮಿ ನಡೆಸುತ್ತಿರುವ ಟೀಕಾ ಪ್ರಹಾರದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, “ಎಚ್ ಡಿ ಕುಮಾರಸ್ವಾಮಿ ಅವರ ಆರೋಪಗಳೇ ಹಾಸ್ಯಾಸ್ಪದ. ಯಾವುದೇ ಸರ್ಕಾರದಲ್ಲಿ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ಸಹಜ ಪ್ರಕ್ರಿಯೆ. ಇದು ಎಲ್ಲಾ ಸರ್ಕಾರಗಳಲ್ಲೂ ನಡೆಯುತ್ತದೆ. ಇದು ಎರಡು ಬಾರಿ ರಾಜ್ಯ ಆಳಿದವರಿಗೆ ಗೊತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲೂ ಅಧಿಕಾರಿಗಳ ವರ್ಗಾವಣೆಯಾಗಿತ್ತು. ಆಗ ಎಚ್‌ಡಿಕೆ ಅಧಿಕಾರಿಗಳ ವರ್ಗಾವಣೆಗೆ ಇಂತಿಷ್ಟು ರೇಟ್ ಎಂದು ಫಿಕ್ಸ್ ಮಾಡಿದ್ರಾ? ಯಾಕಂದ್ರೆ ಕಳ್ಳನ ಗುಟ್ಟು ಕಳ್ಳನಿಗೇ ಗೊತ್ತು ಎಂಬಂತಿದೆ ಎಚ್‌ಡಿಕೆ ವರ್ತನೆ. ನಮ್ಮ ಸರ್ಕಾರದಲ್ಲಿ ವರ್ಗಾವಣೆ ಪಾರದರ್ಶಕವಾಗಿದೆ. ಆದರೆ ತಾನು ಕಳ್ಳ ಪರರ ನಂಬ ಎಂಬಂತೆ ಕುಮಾರಸ್ವಾಮಿ ವರ್ತಿಸಿದರೆ ಏನು ಮಾಡಲು ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

Advertisements

“ಸರ್ಕಾರದ ವಿರುದ್ಧದ ಆರೋಪಗಳಿಗೆ ಸಾಕ್ಷಿ ಇದೆ ಎಂದು ಕುಮಾರಸ್ವಾಮಿ ಪೆನ್ ಡ್ರೈವ್ ಎಂಬ ಹಾವಿನ ಬುಟ್ಟಿ ತೋರಿಸುತ್ತಿದ್ದಾರೆ. ಅವರ ಬಳಿಯಿರುವ ಹಾವಿನ ಬುಟ್ಟಿಯಲ್ಲಿ ಯಾವ ಹಾವಿದೆ ಎಂದು ತಿಳಿದುಕೊಳ್ಳುವ ಕುತೂಹಲ ನಮಗೂ ಇದೆ. ಅವರ ಬುಟ್ಟಿಯಲ್ಲಿ ಹಾವಿದ್ದರೆ ಹೊರಗೆ ಬಿಡಲಿ. ಆಗ ಅದು ಕೇರೇ ಹಾವೋ, ಮಂಡಲದ ಹಾವೋ ಅಥವಾ ವಿಷ ಕಕ್ಕುವ ನಾಗರಹಾವೋ ತಿಳಿಯುತ್ತದೆ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X