ಬೀದರ್‌ | ಸಂವಿಧಾನ ವಿರೋಧಿ ಹೇಳಿಕೆ : ಆನಂದ ಸ್ವರೂಪ ಸ್ವಾಮೀಜಿ ಗಡಿಪಾರಿಗೆ ಆಗ್ರಹ

Date:

Advertisements

‘ಹಿಂದೂ ರಾಷ್ಟ್ರಕ್ಕೆ ಸಂವಿಧಾನ ಸಿದ್ದವಾಗಿದೆ’ ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಶಾಂಭವಿ ಪೀಠಾಧೀಶ್ವರ ಆನಂದ ಸ್ವರೂಪ ಸ್ವಾಮೀಜಿಯನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್ ನಾಟೇಕರ್ ಆಗ್ರಹಿಸಿದ್ದಾರೆ.

ʼಭಾರತ ದೇಶ ಬಹು ಸಂಸ್ಕೃತಿ, ಭಾಷೆಗಳಿಂದ ಕೂಡಿದೆ. ಇಲ್ಲಿ ಹಲವಾರು ಜಾತಿ, ಧರ್ಮ, ವರ್ಗಗಳಿವೆ. ಪ್ರಸ್ತುತ ಇರುವ ಸಂವಿಧಾನದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ನೀಡಲಾಗಿದೆ. ಇಂತಹ ಶ್ರೇಷ್ಠ ಸಂವಿಧಾನ ಬದಲಾಯಿಸಿ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಪೂರಕವಾದ ಸಂವಿಧಾನ ತರುವುದಕ್ಕೆ ಹುನ್ನಾರ ನಡೆಸುತ್ತಿರುವುದು ಖಂಡನೀಯʼ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಸಮಾನತೆ ಸಮಾಜ ಒಪ್ಪದ ಕೆಲವು ಮನುವಾದಿಗಳು ಡಾ.ಅಂಬೇಡ್ಕರ್‌ ಅವರ ರಚಿತ ಸಂವಿಧಾನ ಬದಲಿಸುವ ಹುನ್ನಾರ ನಡೆಸುತ್ತಿದ್ದಾರೆ. ಒಂದು ವೇಳೆ ಭಾರತೀಯ ಸಂವಿಧಾನಕ್ಕೆ ಧಕ್ಕೆ ಬಂದರೆ ಇಡೀ ರಾಷ್ಟ್ರಮಟ್ಟದಲ್ಲಿ ರಕ್ತದ ಕಾಲುವೆ ಹರಿಯುತ್ತದೆ. ದೇಶದಲ್ಲಿ ಹಿಂದೂ ಧರ್ಮದ ಸಂವಿಧಾನ ಹೇರಲು ಮುಂದಾದರೆ ಮತ್ತೊಮ್ಮೆ ಭೀಮಾಕೋರೆಗಾವ್ ಮರುಕಳಿಸುತ್ತದೆʼ ಎಂದು ಎಚ್ಚರಿಕೆ ನೀಡಿದರು.

Advertisements

ʼಮನುವಾದಿಗಳ ಮೂಲ ಉದ್ದೇಶವೇನೆಂದರೆ, ಮೇಲ್ಜಾತಿಯಲ್ಲಿ ಹುಟ್ಟಿ, ವೇದ ಉಪನಿಷತ್ ಗಳನ್ನು ಅಧ್ಯಯನ ಮಾಡಿದವರು ಮಾತ್ರ ಅಧಿಕಾರದಲ್ಲಿರಬೇಕು. ಇನ್ನುಳಿದ ಎಲ್ಲಾ ಜಾತಿ ಜನಾಂಗದವರಿಗೆ ಅಧಿಕಾರದಿಂದ ದೂರ ತಳ್ಳಬೇಕು ಎಂಬುದಾಗಿದೆ. ಆರ್‌ಎಸ್‌ಎಸ್ ತನ್ನ ಶತಮಾನೋತ್ಸವ ಸಂಭ್ರಮದಲ್ಲಿ ಈ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲು ಹೊರಟಿದ್ದಾರೆʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೇಂದ್ರ ಬಜೆಟ್‌ 2025 : ಯಾರು ಏನಂದ್ರು?

ಹಿಂದೂ ಸಂವಿಧಾನದ ಹೇಳಿಕೆ ನೀಡಿದ ಸ್ವಾಮೀಜಿಯ ವಿರುದ್ಧ ಕೂಡಲೇ ದೇಶದ್ರೋಹ ಪ್ರಕರಣ ದಾಖಲಿಸಿ, ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಪ್ರದೀಪ ನಾಟೇಕರ್ ಒತ್ತಾಯಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X