ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ನಡೆಯುತ್ತಿರುವ ರಾಜ್ಯವ್ಯಾಪಿ ಜನಜಾಗೃತಿ ಜಾಥಾದ ಅಂಗವಾಗಿ ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ ಕೊಟ್ಟಿಗೆ ಕಾವಲು ಹಾಡಿಯಲ್ಲಿ ಜನರಿಗೆ ಎಸ್ಐಆರ್ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಡೀಡ್ ಸಂಸ್ಥೆಯ ನಿರ್ದೇಶಕ ಶ್ರೀಕಾಂತ್, “ಭಾರತದ ಸಂವಿಧಾನವು ‘ವಿ ದ ಪೀಪಲ್ ಆಫ್ ಇಂಡಿಯಾ’ ಎಂಬ ತತ್ವದ ಮೇಲೆ ನಿರ್ಮಾಣವಾಗಿದೆ. ಆದಿವಾಸಿಗಳು, ದಲಿತರು ಹಾಗೂ ದಮನಿತ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ನಾವು ಒಪ್ಪುವುದಿಲ್ಲ. ಎಸ್ಐಆರ್ ಪ್ರಕ್ರಿಯೆ ಮೂಲಕ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ಅನ್ಯಾಯವಾಗುವ ಸಾಧ್ಯತೆ ಇರುವುದರಿಂದ ಅದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ” ಎಂದು ಹೇಳಿದರು.
ಜಾಗೃತಿ ಕಾರ್ಯಕ್ರಮದಲ್ಲಿ ಎಸ್ಐಆರ್ನ ಪರಿಣಾಮಗಳು, ಮತದಾರರ ಹಕ್ಕುಗಳ ಮಹತ್ವ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಈ ಸುದ್ದಿ ಓದಿದ್ದೀರಾ?ಎಸ್ಐಆರ್ ವಿರೋಧಿಸಿ ಹುಣಸೂರಿನಲ್ಲಿ ಜನಜಾಗೃತಿ ಜಾಥಾ: ಮತದಾನದ ಹಕ್ಕು ಕಸಿಯುವ ಪ್ರಯತ್ನ ಎಂದು ಆಕ್ರೋಶ
ಕಾರ್ಯಕ್ರಮದಲ್ಲಿ ಡೀಡ್ ಸಂಸ್ಥೆಯ ಶ್ರೀಕಾಂತ್, ಜಿವಿಕ ಉಮೇಶ್, ಶಿವಕುಮಾರ್, ಜನಶಕ್ತಿಯ ಹೇಮಂತ್ ಕುಮಾರ್, ಕೆವಿಎಸ್ನ ಯಮನೂರಪ್ಪ, ಸವಿತಾ ಪಿ.ಬಿ. ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.




