ಆಲಮಟ್ಟಿ: 524.256 ಮೀಟರ್ ನೀರು ಸಂಗ್ರಹಕ್ಕೆ ಸಂಸದ ಗದ್ದಿಗೌಡರ್‌ಗೆ ಮನವಿ

Date:

ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ವಿಜಯಪುರ ವತಿಯಿಂದ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡ ಅವರನ್ನು ಭೇಟಿ ಮಾಡಿ, ಆಲಮಟ್ಟಿ ಅಣೆಕಟ್ಟಿನಲ್ಲಿ 524.256 ಮೀಟರ್ ಮಟ್ಟದವರೆಗೆ ನೀರು ಸಂಗ್ರಹ ಮತ್ತು ಬಳಕೆಗೆ ಅಗತ್ಯವಾದ ಗೆಜೆಟ್ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸುವಂತೆ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಯಿತು.

- Advertisement -

ಕೃಷ್ಣಾ ನದಿ ತಟದ ಜನರ ಬಹುಕಾಲದ ಬೇಡಿಕೆಯಾಗಿರುವ ಆಲಮಟ್ಟಿ ಅಣೆಕಟ್ಟಿನ ಪೂರ್ಣ ಪ್ರಮಾಣದ ನೀರು ಸಂಗ್ರಹ ಮತ್ತು ಬಳಕೆಯು ಉತ್ತರ ಕರ್ನಾಟಕದ ನೀರಾವರಿ, ಕುಡಿಯುವ ನೀರಿನ ಪೂರೈಕೆ ಹಾಗೂ ಸಮಗ್ರ ಅಭಿವೃದ್ಧಿಗೆ ಅತ್ಯಂತ ಅಗತ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಯಿತು.

“ಈ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲು ನಿಯೋಗಕ್ಕೆ ಅವಕಾಶ ಕಲ್ಪಿಸಿ, ಯೋಜನೆಗೆ ಅಗತ್ಯವಿರುವ ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಗೆಜೆಟ್ ಅಧಿಸೂಚನೆ ಶೀಘ್ರ ದೊರಕುವಂತೆ ಕ್ರಮ ಕೈಗೊಳ್ಳಬೇಕು” ಎಂದು ಸಂಸದರಲ್ಲಿ ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಈ ಹೋರಾಟ ಕೇವಲ ಒಂದು ಜಿಲ್ಲೆಯ ಬೇಡಿಕೆಯಲ್ಲ, ಕೃಷ್ಣಾ ಕೊಳ್ಳ ಪ್ರದೇಶದ ರೈತರು, ಯುವಕರು ಹಾಗೂ ಜನಸಾಮಾನ್ಯರ ಬದುಕಿನ ಪ್ರಶ್ನೆಯಾಗಿದ್ದು, ಜನರ ನೀರಿನ ಹಕ್ಕಿಗಾಗಿ ಹೋರಾಟ ನಿರಂತರವಾಗಿ ಮುಂದುವರಿಯಲಿದೆ” ಎಂದು ಸಮಿತಿ ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪಂಚಪ್ಪ ಕಲಬುರ್ಗಿ, ಅರವಿಂದ್ ಕುಲಕರ್ಣಿ, ಬಿ. ಭಗವಾನ್ ರೆಡ್ಡಿ, ಸುರೇಶ್ ಬಿಜಾಪುರ, ಸಿದ್ದಲಿಂಗ ಬಾಗೇವಾಡಿ, ಭೋಗೇಶ್ ಸೋಲಾಪುರ ಹಾಗೂ ಗುರುರಾಜ್ ಪಡಶೆಟ್ಟಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...