ವಿಜಯಪುರ | ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ

Date:

Advertisements

ಜಿಲ್ಲೆಯಲ್ಲಿ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ದಿನಸಿ ಅಂಗಡಿ ಕಿರಾಣಿ ಮತ್ತು ಪಾನ್ ಶಾಪ್ ಡಾಬಾಗಳಲ್ಲಿ ವಿಪರೀತವಾಗಿ ಮಧ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಕ್ರಮಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.

ಎಲ್ಲೆಂದರಲ್ಲಿ ಮದ್ಯ ಸಿಗುತ್ತಿರುವ ಕಾರಣ ಜಿಲ್ಲೆಯ ಬಹುತೇಕ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳು ಮದ್ಯ ವ್ಯಸನಿಗಳಾಗುತ್ತಿರುವುದು ಖೇದಕರ ಸಂಗತಿ. ಅನುಮತಿ ಪಡೆದಿರುವ ಮತ್ತು ಪಡೆಯದಿರುವ ಬಹುತೇಕ ಮದ್ಯದ ಅಂಗಡಿಗಳು ಬೆಳಗ್ಗೆ 6 ಗಂಟೆಗೆ ಆರಂಭವಾಗುತ್ತವೆ. ಇದು ಶಾಲಾ ಮಕ್ಕಳ ಮೇಲೆ ತೀವ್ರತರಹದ ಪರಿಣಾಮವನ್ನು ಬೀರುತ್ತಿದೆ.

ಬೆಳಗ್ಗೆ ಮಕ್ಕಳು ಶಾಲೆ ಟ್ಯೂಷನ್ ಸೇರಿದಂತೆ ವಿವಿಧ ರೀತಿಯ ಕಲಿಕಾ ಅಭ್ಯಾಸಗಳಿಗಾಗಿ ಹೊರಡುತ್ತಿರುವಾಗ ಮಧ್ಯದ ಅಂಗಡಿಗಳು ತೆರೆದಿರುವುದು ಮಧ್ಯ ಕುಡಿದು ಗಾಳಿಯಲ್ಲಿ ತೋರಾಡುತ್ತಿರುವ ದೃಶ್ಯಗಳು, ಜಗಳಾಡುವ ದೃಶ್ಯಗಳು ಮಕ್ಕಳ ಮನಸ್ಸಿನ ಮೇಲೆ ವಿಪರೀತವಾಗಿ ಪರಿಣಾಮವನ್ನು ಬೀರುತ್ತಿವೆ. ಇದು ಅವರ ಕಲಿಕಾ ಮೌಲ್ಯಗಳ ಮೇಲೆ ವ್ಯತರಿಕ್ತವಾದ ಪರಿಣಾಮವನ್ನು ಬೀರುತ್ತಿದೆ. ಆದ್ದರಿಂದಾಗಿ ಅನುಮತಿ ಪಡೆದಿರುವ ಮತ್ತು ಅನುಮತಿ ಪಡೆಯದೇ ಇರುವ ಜಿಲ್ಲೆಯ ಎಲ್ಲಾ ಮದ್ಯದ ಅಂಗಡಿಗಳಿಂದ ಅಬಕಾರಿ ಇಲಾಖೆಯು ಪ್ರತಿ ತಿಂಗಳು ಹಪ್ತಾ ವಸೂಲಿ ಮಾಡುತ್ತಿರುವ ವಿಷಯ ಹೊಸ ಸಂಗತಿಯಾಗಿ ಏನು ಉಳದಿಲ್ಲ. ಅಬಕಾರಿ ಇಲಾಖೆಯ ಅಧಿಕಾರಿಗಳ ಕುಮ್ಮಕ್ಕು ಮತ್ತು ಲಂಚ ಬಾಕ ಪ್ರವೃತ್ತಿಯಿಂದ ಇದು ನಿರಂತರವಾಗಿ ನಡೆಯುತ್ತಿದೆ.

Advertisements

ಪ್ರತಿ ಅಂಗಡಿಗಳಿಂದ ತಿಂಗಳಿಗೆ 25 ರಿಂದ 30 ಸಾವಿರ ರೂಪಾಯಿ ಹಪ್ತಾ ವಸೂಲಿ ಮಾಡುತ್ತಾರೆ ಎಂದು ಜಿಲ್ಲೆಯ ಸಾರ್ವಜನಿಕರಲ್ಲಿ ತೀವ್ರ ತರಹದ ಚರ್ಚೆಯಲ್ಲಿರುವ ಸಂಗತಿಯಾಗಿದೆ. ಆದ್ದರಿಂದಾಗಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಹಪ್ತಾ ವಸೂಲಿ ದಂಧೆಯನ್ನು ಮೋಟಕುಗೊಳಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮಳಿಗೆಗಳು ಮತ್ತು ಡಾಬಾಗಳನ್ನು ಬಂದು ಮಾಡಿ. ಜಿಲ್ಲೆಯ ಮಕ್ಕಳ ಭವಿಷ್ಯದ ಶೈಕ್ಷಣಿಕ ಬದುಕಿನ ಉಳಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಬರೆದು ಮನವಿ ಮಾಡಿದ್ದಾರೆ.

ಈ ವೇಳೆ ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಕೇಶ್ ಇಂಗಳಗಿ, ಹಮೀದ್ ಇನಾಮ್ದಾರ್, ಪ್ರವೀಣ್ ಕನಸೆ, ವಿಕ್ರಮ್ ವಾಗ್ಮೊರೆ ಹಾಗೂ ಶ್ರೀಶೈಲ ಮಠ ಮೈಬೂಬ್ ತಾಂಬೋಳಿ, ರಾಘವೇಂದ್ರ ಚಲವಾದಿ, ಸಾದಿಕ್ ಪಟವೆಗಾರ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X