ಚಿಕ್ಕಬಳ್ಳಾಪುರ | ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪರಿಶಿಷ್ಟ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Date:

Advertisements


2025-26ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪರಿಶಿಷ್ಟ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಅಥವಾ ತಾಲ್ಲೂಕು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಗೌರಿಬಿದನೂರು ರವರಿಂದ ಅರ್ಜಿಗಳನ್ನು ಪಡೆದು ಮೇ 3 ರ ಸಂಜೆ 5 ಗಂಟೆಯೊಳಗಾಗಿ ಸಂಬಂಧಪಟ್ಟ ಕಚೇರಿಗೆ ಸಲ್ಲಿಸಲು ಕೋರಿದೆ.

ಅರ್ಹತೆಗಳು:
ವಿದ್ಯಾರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. 5ನೇ ತರಗತಿಯಲ್ಲಿ ಶೇ 60% ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು 5ನೇ ತರಗತಿಯ ಅಂಕಪಟ್ಟಿ ಲಗತ್ತಿಸಬೇಕು. (ದೃಢಿಕೃತ ಪ್ರತಿಗಳು) ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 2 ಲಕ್ಷಗಳ ಒಳಗಿರಬೇಕು. 2025-26ನೇ ಸಾಲಿನಿಂದ ಅರ್ಹ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷೆ ಮುಖಾಂತರ ಆಯ್ಕೆ ಮಾಡಲಾಗುವುದು.

Advertisements

ಪ್ರತಿಷ್ಠಿತ ಶಾಲೆಗಳ ವಿವರ:
ಶ್ರೀ ಬಾಲಗಂಗಾಧರನಾಥ ಸ್ವಾಮಿಜಿ ಗ್ರಾಮಾಂತರ ಆಂಗ್ಲ ಪ್ರೌಢಶಾಲೆ, ಅಗಲಗುರ್ಕಿ, ಶ್ರೀ ಬಾಲಗಂಗಾಧರನಾಥ ಸ್ವಾಮಿಜಿ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ, ಎಸ್.ಎಫ್.ಎಸ್ ಸ್ಕೂಲ್, ಎಂ.ಜಿ ರಸ್ತೆ, ಚಿಂತಾಮಣಿ, ಸೆಂಟ್ಸ್ ಆನ್ಸ್ ಸ್ಕೂಲ್ (ಐ.ಸಿ.ಎಸ್.ಇ) ಮಾದನಹಳ್ಳಿ, ಗೌರಿಬಿದನೂರು, ನ್ಯೂ ಹೊರೈಜೆನ್ ಇಂಗ್ಲೀಷ್ ಸ್ಕೂಲ್ ಚಿಕ್ಕಬಳ್ಳಾಪುರ, ಅರವಿಂದ ಪ್ರೈಮರಿ ಮತ್ತು ಹೈಸ್ಕೂಲ್ ರಾಮಪಟ್ಟಣ ರಸ್ತೆ, ಗುಡಿಬಂಡೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲುಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X