ಅಧಿವೇಶನ | ನೋಂದಣಿ ತಿದ್ದುಪಡಿ ವಿಧೇಯಕ ಅಂಗೀಕಾರ, ನಕಲಿ ನೋಂದಣಿಗೆ 3 ವರ್ಷ ಜೈಲು

Date:

Advertisements
  • ನಕಲಿ ನೋಂದಣಿ ಮಾಡುವ ಅಧಿಕಾರಿ ವರ್ಗಕ್ಕೆ ಖಡಕ್ ಎಚ್ಚರಿಕೆ
  • ನಕಲಿ ನೋಂದಣಿ ಮಾಡಿದರೆ ಅಧಿಕಾರಿಗಳಿಗೆ ಮೂರು ವರ್ಷ ಜೈಲು

ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಥವಾ ಕಾನೂನಿನಡಿಯಲ್ಲಿ ನಿಷೇಧಿಸಲಾದ ಇತರ ದಾಖಲೆಗಳ ಆಧಾರದ ಮೇಲೆ ಆಸ್ತಿ ವಹಿವಾಟುಗಳನ್ನು ಅಧಿಕೃತಗೊಳಿಸುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸುವ ಮತ್ತು ಅಂತಹ ನಕಲಿ ನೋಂದಣಿಯನ್ನು ರದ್ದುಗೊಳಿಸುವ ನೋಂದಣಿ ವಿಧೇಯಕವನ್ನು ಸಚಿವ ಕೃಷ್ಣಭೈರೇಗೌಡ ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದರು.

ಪ್ರತಿಪಕ್ಷಗಳ ನಾಯಕರ ಗಲಾಟೆ ನಡುವೆ ಈ ಮಸೂದೆ ಸರ್ವಾನುಮತದಿಂದ ಅಂಗೀಕಾರಗೊಂಡಿತು. ಸದನದಲ್ಲಿ ಮಸೂದೆಯನ್ನು ಮಂಡಿಸಿ ಮಾತನಾಡಿದ ಸಚಿವರು, “ನೋಂದಣಿ ಕಾಯ್ದೆ 1908ರಲ್ಲಿ ಜಾರಿಯಾಗಿದೆ. ಈ ಕಾಯ್ದೆಯಲ್ಲಿ ಯಾವುದೇ ಮಾಲೀಕತ್ವ ಇಲ್ಲದ, ದಾಖಲೆ ಇಲ್ಲದ ಅಥವಾ ನಿಜವಾದ ಮಾಲೀಕರಂತೆ ನಟಿಸುವ ಮೂಲಕ ಮಾಡಿದ ಮೋಸದ ನೋಂದಣಿಯನ್ನು ರದ್ದುಪಡಿಸಲು ನೋಂದಣಿ ಪ್ರಾಧಿಕಾರಕ್ಕೆ ಅಧಿಕಾರ ಇರುವುದಿಲ್ಲ” ಎಂದು ಹೇಳಿದರು.

“ನೊಂದ ಮಾಲೀಕರು ಸಿವಿಲ್ ನ್ಯಾಯಾಲಯದ ಮೂಲಕ ಮೋಸದ ನೋಂದಣಿಯನ್ನು ರದ್ದು ಮಾಡಬೇಕಿರುತ್ತದೆ. ಆದರೆ, ನ್ಯಾಯಾಂಗ ಆದೇಶ ಪಡೆಯುವ ಪ್ರಕ್ರಿಯೆ ಕನಿಷ್ಠ 10 ವರ್ಷಕ್ಕೂ ಹೆಚ್ಚಿರುತ್ತದೆ. ಇದರಿಂದಾಗಿ ಆಸ್ತಿ ಮಾಲೀಕರಿಗೆ ಕಿರುಕುಳ, ತೊಂದರೆ ಅನ್ಯಾಯವಾಗುತ್ತದೆ. ಸಾರ್ವಜನಿಕರಿಗೆ ಉಂಟಾಗುವ ಇಂತಹ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ” ಎಂದು ಮಸೂದೆಯನ್ನು ಸಮರ್ಥಿಸಿಕೊಂಡರು.

Advertisements

“ನಕಲಿ ದಾಲೆಗಳ ಮೂಲಕ ಮೋಸ ಮಾಡುವವರಿಗೆ ಸಹಾಯವಾಗುತ್ತಿತ್ತು. ಕೆಲವು ಅಧಿಕಾರಿಗಳು ತಮಗೇ ಗೊತ್ತಿಲ್ಲದೆ ನಕಲಿ ನೋಂದಣಿ ಮಾಡಿರುತ್ತಾರೆ. ಇನ್ನೂ ಕೆಲವು ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ನಕಲೀದಾರರ ಜೊತೆ ಶಾಮೀಲಾಗಿ ತಪ್ಪು ನೋಂದಣಿ ಮಾಡಿದ್ದಾರೆ. ಇಂತಹ ಹಲವು ಪ್ರಕರಣಗಳ ದೊಡ್ಡ ಪಟ್ಟಿಯೇ ನನ್ನ ಬಳಿ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರಿನಲ್ಲಿ ಹುಟ್ಟಿರುವ ‘ಇಂಡಿಯಾ’ದ ದಾರಿ ಸಲೀಸಲ್ಲ

“ಪ್ರಸ್ತುತ ಶಾಸಕರಾಗಿರುವ ನರೇಂದ್ರ ಸ್ವಾಮಿ, ಅಭಯ್ ಪಾಟೀಲ್ ಅವರ ಆಸ್ತಿಯನ್ನೇ ಹೀಗೆ ನಕಲು ದಾಖಲೆಯ ಮೇಲೆ ಕಬಳಿಸಲಾಗಿತ್ತು. ಮಾಜಿ ಶಾಸಕರಾದ ಗೂಳಿಹಟ್ಟಿ ಶೇಖರ್ ಹಾಗೂ ಬಿ ಶಂಕರಾನಂದ್ ಸಹ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದರು. ಶಾಸಕರಿಗೇ ಈ ಪರಿಸ್ಥಿತಿಯಾದರೆ, ಸಾಮಾನ್ಯರ ಪರಿಸ್ಥಿತಿ ಏನು? ಹೀಗಾಗಿ ಆಡಳಿತ ಸುಧಾರಣೆ, ಆಡಳಿತ ಸರಳೀಕರಣ ಮತ್ತು ಕಚೇರಿಗಳಲ್ಲಿ ವಿಳಂಬ, ಶೋಷಣೆ, ಸುಲಿಗೆ ಇಲ್ಲದೆ ಜನರ ಕೆಲಸ ತಕ್ಷಣ ಆಗಬೇಕು ಎಂಬ ಕಾರಣದಿಂದ ಇಂದು ನೋಂದಣಿ ತಿದ್ದುಪಡಿ ವಿಧೇಯಕವನ್ನು ಜಾರಿಗೆ ತರಲಾಗಿದೆ ತರಲಾಗುತ್ತಿದೆ” ಎಂದು ಸಚಿವ ಕೃಷ್ಣಭೈರೇಗೌಡ ಸದನಕ್ಕೆ ತಿಳಿಸಿದರು.

ನೋಂದಣಿ ತಿದ್ದುಪಡಿ ಮಸೂದೆ 2023

ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಯ ಪ್ರಕಾರ, ನೋಂದಣಿ ಅಧಿಕಾರಿ (ಸಾಮಾನ್ಯವಾಗಿ ಸಬ್-ರಿಜಿಸ್ಟ್ರಾರ್) ನಕಲಿ ದಾಖಲೆಗಳನ್ನು ನೋಂದಾಯಿಸಲು ನಿರಾಕರಿಸಬೇಕು. ಯಾವುದೇ ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಕೇಂದ್ರ ಅಥವಾ ರಾಜ್ಯ ಕಾಯ್ದೆಗಳಿಂದ ನಿಷೇಧಿಸಲಾಗಿದ್ದು, ಅಂತಹ ಆಸ್ತಿಗಳ ದಾಖಲೆಗಳನ್ನು ನೋಂದಾಯಿಸಲು ಅಧಿಕಾರಿಗಳು ನಿರಾಕರಿಸಬೇಕು. ಅಧಿಕಾರಿಗಳು ನಿಯಮ ಮೀರಿ ನಕಲಿ ದಾಖಲಾತಿಗಳನ್ನು ನೋಂದಾಯಿಸಿದರೆ, ಈ ಮಸೂದೆಯು ಅಧಿಕಾರಿಗಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಪ್ರಸ್ತಾಪಿಸುತ್ತದೆ. ದಾಖಲೆಗಳ ಮೋಸದ ನೋಂದಣಿಯಲ್ಲಿ ತೊಡಗಿರುವ ಕಂಪನಿಗಳನ್ನು ಶಿಕ್ಷಿಸಲು ಮಸೂದೆ ಪ್ರಸ್ತಾಪಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X