ಬೀದರ್‌ | ಉಪ ತಹಶೀಲ್ದಾರ್‌ ವರ್ಗಾವಣೆಗೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ

Date:

Advertisements

ಬೀದರ ತಾಲ್ಲೂಕಿನ ಜನವಾಡ ಹೋಬಳಿ ಕೇಂದ್ರದ ನಾಡ ಕಚೇರಿ ಉಪ ತಹಶೀಲ್ದಾರ್ ಅಶೋಕ ರಾಜಗೀರ ಅವರು ಸಾರ್ವಜನಿಕರ ಕೆಲಸಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೂಡಲೇ ಅವರನ್ನು ಅನ್ಯ ಜಿಲ್ಲೆಗೆ ವರ್ಗಾಯಿಸುವಂತೆ ಒತ್ತಾಯಿಸಿ ಬೀದರ್‌ ನಲ್ಲಿ ಅರಬೆತ್ತಲೆ ಪ್ರತಿಭಟನೆ ನಡೆಯಿತು.

ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಹಾಗೂ ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ ಪದಾಧಿಕಾರಿಗಳು ಜಂಟಿಯಾಗಿ ಅರಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸಲ್ಲಿಸಿದರು.

“ಜನವಾಡ ಹೋಬಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಸ್ಥರು ಆದಾಯ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ, ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಅರ್ಜಿ ಸಲ್ಲಿಸಿದರೆ ಏನಾದರೂ ಒಂದು ಕಾರಣ ಹೇಳಿ ಅರ್ಜಿಗಳು ತಿರಸ್ಕರಿಸುತ್ತಿದ್ದಾರೆ. ಬಿಪಿಎಲ್ ಪಡಿತರ ಚೀಟಿ ಇದ್ದವರಿಗೆ ನಿಮ್ಮ ಹತ್ತಿರ ಎಪಿಎಲ್ ಪಡಿತರ ಚೀಟಿಯಿದೆ, ನಿಮ್ಮ ಆದಾಯ ಹೆಚ್ಚು ಇರುತ್ತದೆ ಎಂದು ಅರ್ಜಿ ತಿರಸ್ಕರಿಸಿ ಹಿಂಬರಹ ನೀಡುತ್ತಿದ್ದಾರೆ. ಆದರೆ ಮಧ್ಯವರ್ತಿಗಳ ಮೂಲಕ ಹಣ ಪಡೆದು ತಮಗೆ ಬೇಕಾದವರ ಅರ್ಜಿ ವಿಲೇವಾರಿ ಮಾಡಿಕೊಡುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

Advertisements

ಈ ಬಗ್ಗೆ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಗಮನಕ್ಕೆ ತರಲಾಗಿದೆ, ಆದರೆ ನಾಡ ತಹಶೀಲ್ದಾರ್‌ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಸರ್ಕಾರದ ಹಲವು ಯೋಜನೆಗಳ ಪ್ರಮಾಣ ಪತ್ರ ಮತ್ತು ಇನ್ನಿತರ ದಾಖಲೆಗಳನ್ನು ಸೂಕ್ತ ಸರಿಯಾದ ಸಮಯಕ್ಕೆ ತಲುಪಿಸದೇ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಜನವಾಡ ನಾಡ ಕಚೇರಿ ಉಪ ತಹಸೀಲ್ದಾರ್‌ ಅವರನ್ನು ಕೂಡಲೇ ಬೀದರ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ವರ್ಗಾಯಿಸಿ ಸರ್ವಾಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಮತಿಯ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ, ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ: ಸಚಿವ ಎಂ ಬಿ ಪಾಟೀಲ್

ಈ ಸಂದರ್ಭದಲ್ಲಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಶಿಂಧೆ, ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ, ಸಂಗಮೇಶ ಭಾವಿದೊಡ್ಡಿ, ವಿನೋದಕುಮಾರ ಶಿಂಧೆ, ಸೂರ್ಯಕಾಂತ ಸಾಧುರೆ, ವಿಜಯಕುಮಾರ ಜಡಗೆ, ಅನೀಲಕುಮಾರ ಮಡೆ, ಬೀರಗೊಂಡ ಘೋಡಂಪಳ್ಳೆ, ಕೈಲಾಸ ವಿಳಾಸಪೂರ, ಧನರಾಜ ಮೇತ್ರೆ, ಗುರು ನೇಮತಾಬಾದ, ವೆಂಕಟ ವಡ್ಡಿಯರ, ಅನೀಲಕುಮಾರ ಮಡೆ, ವಿಶಾಲ ದೊಡ್ಡಿ, ಜೇಮ್ಸ್ ಮಮದಾಪೂರೆ, ಸಂದೀಪ ಕಾಂಟೆ, ರಾಜಕುಮಾರ ಗುಮ್ಮೆ, ವಿಜಯಕುಮಾರ ಜಡಗೆ, ಸೂರ್ಯಕಾಂತ ಸಾಧುರೆ, ಸೇರ ಅಲಿ,ವಿಜಯಕುಮಾರ ಜಡಗೆ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X