ಅರಕಲಗೂಡು | ಎ ಮಂಜು ಪರ ರೇವಣ್ಣ ಮತಯಾಚನೆ

Date:

ಕೇವಲ ಹತ್ತೂವರೆ ತಿಂಗಳಿನಲ್ಲಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ಇಡೀ ದೇಶದಲ್ಲಿ ಸರ್ವನಾಶವಾಗುತ್ತದೆ. ಕಳೆದೆರಡು ವರ್ಷದಿಂದ ಕಾಂಗ್ರೆಸ್ ಏನು ಮಾಡುತ್ತಿದೆಯೆಂದು ನಿಮಗೆಲ್ಲಾ ಗೊತ್ತಿದೆ ಎಂದು ಎಚ್‌.ಡಿ ರೇವಣ್ಣ ಕಿಡಿಕಾರಿದರು.

- Advertisement -

ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಬಿದರೂರು ಗ್ರಾಮದಲ್ಲಿ ಜೆಡಿಎಸ್‌ ಅಭ್ಯರ್ಥಿ ಎ ಮಂಜು ಪರವಾಗಿ ಮತಯಾಚಿಸಿ, ಅವರು ಮಾತನಾಡಿದರು. “ಅರಸೀಕೆರೆ ಹಾಗೂ ಅರಕಲಗೂಡು ಕ್ಷೇತ್ರದ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬೇಕೆಂದು ಕೈ ನಾಯಕರು ಹೋರಾಟ ಮಾಡಿದರು. ಒಬ್ಬರಿಗೆ ಟಿಕೆಟ್ ನೀಡಿ ಇನ್ನೊಬ್ಬರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಿಲ್ಲ. ಬಿಜೆಪಿಯವರು 40‌ ಪರ್ಸೆಂಟ್, 20‌ ಪರ್ಸೆಂಟ್ ಎನ್ನುತ್ತ ಅವರುಗಳೇ ತಾತ ಮುತ್ತಾತಂದಿರು ಕೂತು ತಿನ್ನುವಷ್ಟು ಹಣ ಮಾಡಿಕೊಂಡಿದ್ದಾರೆ. ತುಮಕೂರಿನಲ್ಲಿ ಕಾಂಗ್ರೆಸ್‌ನ ಎಲ್ಲ ಮುಖಂಡರೂ ಸೇರಿ ದೇವೇಗೌಡರನ್ನು ಸೋಲಿಸಿದರು” ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ತಮ್ಮ 90ನೇ ವಯಸ್ಸಿನಲ್ಲಿಯೂ ದೇವೇಗೌಡರು ಹೋರಾಟ ಮಾಡುತ್ತಿದ್ದಾರೆ ಎಂದರೆ ದೇವೇಗೌಡರಿಗೆ ಶಿವನ ಶಕ್ತಿಯಿದೆ. ಬಿದರೂರಿನ ಬಸವೇಶ್ವರ ದೇವರಿಗೆ ಪೂಜೆ ಸಲ್ಲಿಸಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದರು. ಅದೇ ರೀತಿ ಬಸವೇಶ್ವರ ಸನ್ನಿಧಿಯಲ್ಲಿ ಇಂದು ಕೇಳಿಕೊಳ್ಳುತ್ತಿದ್ದೇನೆ ಎ ಮಂಜು ಅವರಿಗೆ ಮತ ನೀಡಿ, ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಬೇಕು. ದೇವೇಗೌಡರ ಜೊತೆ ನಾವೆಲ್ಲರೂ ನಿಲ್ಲಬೇಕು” ಎಂದರು.

“ದೇವೇಗೌಡರು ರಾಜಕೀಯವಾಗಿ ಈ ಮಟ್ಟಕ್ಕೆ ಬೆಳೆಯಬೇಕೆಂದರೆ ಕುಂಚಿಟಿಗ ಸಮಾಜದ ಪಾತ್ರ ಬಹಳಷ್ಟಿದೆ. ಈ ಗ್ರಾಮದ ಜನತೆಗೆ ಯಾವುದೇ ಕೆಲಸ ಆಗಬೇಕು ಎಂದರೂ ಅದನ್ನು ಖಂಡಿತಾ ನೆರವೇರಿಸಿಕೊಡುವೆ” ಎಂದು ಆಶ್ವಾಸನೆ ನೀಡಿದರು.

ಜೆಡಿಎಸ್‌ ಅಭ್ಯರ್ಥಿ ಎ.ಮಂಜು ಮಾತನಾಡಿ, “ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಸಾಕಷ್ಟು ವರ್ಷಗಳ ಕಾಲ ಆಡಳಿತ ಮಾಡಿದರೂ ಜನಪರ ಆಡಳಿತ ನಡೆಸಿಲ್ಲ. ಜೆಡಿಎಸ್‌ ಈ ಬಾರಿ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಹಾಗಾಗಿ ಈ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವುಕೊಟ್ಟ ಪ್ರೀತಂ ಗೌಡ

“ನಾನು ಶಾಸಕ ಹಾಗೂ ಸಚಿವನಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಸಾಕ್ಷಿಯಾಗಿದ್ದೇನೆ. ನನ್ನ ಕ್ಷೇತ್ರದ ಜನರು ಸ್ವಾಭಿಮಾನಿಗಳು. ಮತ್ತೊಮ್ಮೆ ನನ್ನನ್ನು ಆಶೀರ್ವದಿಸುವರು”  ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...