- ಜೆಡಿಎಸ್ ಕಾರ್ಯಕರ್ತ ಕಿರಣ್ ಎಂಬುವವರ ಮೇಲೆ ಹಲ್ಲೆ
- ಕೆ ಎಂ ಶಿವಲಿಂಗೇಗೌಡ ಬೆಂಬಲಿಗರಿಂದ ಹಲ್ಲೆ ಆರೋಪ
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ.
ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಜೆಡಿಎಸ್ ಕಾರ್ಯಕರ್ತ ಕಿರಣ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ
“ರಾತ್ರಿ 9.30ರ ನಂತರವೂ ಯಾಕೆ ಪ್ರಚಾರ ಮಾಡುತ್ತಿದ್ದೀರಿ? ಎಂದು ಕೇಳಿದೆ. ಅಷ್ಟಕ್ಕೇ ನನ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆಗೆ ಬಂದರು. ಕಾಂಗ್ರೆಸ್ ಗುಂಪಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ ಎಂ ಶಿವಲಿಂಗೇಗೌಡರ ಮಗ ಕೂಡಾ ಇದ್ದರು. ಆ ಗುಂಪಿನಲ್ಲಿದ್ದ ಕೆಲವರು ನನ್ನ ಮೇಲೆ ಹಲ್ಲೆ ಮಾಡಿ, ಬ್ಲೇಡ್ನಿಂದ ಕೊಯ್ದಿದ್ದಾರೆ” ಎಂದು ಹಲ್ಲೆಗೆ ಒಳಗಾದ ಕಿರಣ್ ದೂರಿದ್ದಾರೆ.
ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ.