ಭಾರತೀಯ ಕೆಥೋಲಿಕ್ ಧರ್ಮಾಧ್ಯಕ್ಷರುಗಳ ಸಮ್ಮೇಳನ: ಉಪಾಧ್ಯಕ್ಷರಾಗಿ ಬೆಂಗಳೂರು ಆರ್ಚ್‌ ಡಯಾಸೀಸ್‌ನ ಡಾ. ಪೀಟರ್ ಮಚಾದೊ ಆಯ್ಕೆ

Date:

Advertisements

ಬೆಂಗಳೂರಿನ ಪ್ರಾಂತೀಯ ಮಹಾ ಧರ್ಮಾಧ್ಯಕ್ಷರಾದ ವಂದನೀಯ ಡಾ. ಪೀಟರ್ ಮಚಾದೊ ರವರು, ಭುಬನೇಶ್ವರದ ವಿಶ್ವವಿದ್ಯಾನಿಲಯಲ್ಲಿ ನಡೆಯುತ್ತಿರುವ 36ನೇ ಸಿಸಿಬಿಐನ ಸಾರ್ವತ್ರಿಕ ಸಭೆಯಲ್ಲಿ ಭಾರತೀಯ ಕೆಥೋಲಿಕ್ ಧರ್ಮಾಧ್ಯಕ್ಷರುಗಳ ಸಮ್ಮೇಳನದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಬೆಂಗಳೂರಿನ ಆರ್ಚ್‌ ಡಯಾಸೀಸ್‌ ತಿಳಿಸಿದೆ.

ಜನವರಿ 28ರಂದು ಪ್ರಾರಂಭವಾಗಿರುವ ಸಿಸಿಬಿಐನ ಸಾರ್ವತ್ರಿಕ ಸಭೆಯು ಫೆಬ್ರವರಿ 4ರಂದು ಮುಕ್ತಾಯಗೊಳ್ಳಲಿದೆ. ಸಮ್ಮೇಳನವು ಕಾರ್ಡಿನಲ್ ಫೆಲಿಪೆ ನೇರಿ ಫೆರೊರವರನ್ನು ಅಧ್ಯಕ್ಷರನ್ನಾಗಿ ಮರು ಚುನಾಯಿಸಿತು. ಅದೇ ವೇಳೆಯಲ್ಲಿ ರಾಂಚಿಯ ಮಹಾ ಧರ್ಮಾಧ್ಯಕ್ಷರಾದ ವಿನ್ಸೆಂಟ್ ಐಂಡ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

WhatsApp Image 2025 02 04 at 12.53.13 PM

ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾದೋ(70) ಮೇ 26, 1954 ರಂದು ಜನಿಸಿದ್ದು, ಡಿಸೆಂಬರ್ 8, 1978 ರಂದು ಕಾರವಾರ ಧರ್ಮಕ್ಷೇತ್ರದಲ್ಲಿ ಯಾಜಕ ದೀಕ್ಷೆಯನ್ನು ಸ್ವೀಕರಿಸಿದ್ದರು.

Advertisements

ರೋಮ್‌ನ ಪಾಂಟಿಫಿಕಲ್ ಅರ್ಬನ್ ವಿಶ್ವವಿದ್ಯಾಲಯದಿಂದ ‘ಧರ್ಮಸಭೆಯ ಕಾನೂನುಗಳಲ್ಲಿ’ ಉನ್ನತ ಶಿಕ್ಷಣವನ್ನು ಮುಗಿಸಿ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಅವರ ಪಾಲನಾ ಸೇವೆಯ ಪ್ರಯಾಣದಲ್ಲಿ ಅವರನ್ನು ಫೆಬ್ರವರಿ 2, 2006 ರಂದು ಬೆಳಗಾವಿಯ ಧರ್ಮಾಧ್ಯಕ್ಷರನ್ನಾಗಿ ನೇಮಿಸಲಾಯಿತು ಮತ್ತು ನಂತರ ಮಾರ್ಚ್ 19, 2018 ರಂದು ಬೆಂಗಳೂರಿನಲ್ಲಿ ಮಹಾಧರ್ಮಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಇದನ್ನು ಓದಿದ್ದೀರಾ? ಮಂಗಳೂರು | ಇಡಿ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಗೆ ದಾಳಿ ಪ್ರಕರಣ: ಮತ್ತೋರ್ವನ ಬಂಧನ

ಮೇ 31, 2018 ರಂದು ಮಹಾಧರ್ಮಾಧ್ಯಕ್ಷರ ಧರ್ಮಾಧ್ಯಕ್ಷೀಯ ದೀಕ್ಷೆಯನ್ನು ಸ್ವೀಕರಿಸಿದ್ದ ಅವರು, ಕರ್ನಾಟಕ ಪ್ರಾದೇಶಿಕ ಧರ್ಮಾಧ್ಯಕ್ಷರುಗಳ ಮಂಡಳಿಯ ಅಧ್ಯಕ್ಷರಾಗಿಯೂ (KRCBC), ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹೂಮನ್ ರೈಟ್ಸ್ (AKUCFHR) ಅಧ್ಯಕ್ಷರಾಗಿಯೂ ಮತ್ತು ಶ್ರೀಸಾಮಾನ್ಯರ ಆಯೋಗದ ಸಿಸಿಬಿಐನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಬೆಂಗಳೂರಿನ ಆರ್ಚ್‌ ಡಯಾಸೀಸ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ಜೆ ಎ ಕಾಂತರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X