ಬೆಂಗಳೂರು | ವಿಳಾಸ ತಪ್ಪಾಗಿದ್ದಕ್ಕೆ ವಾಗ್ವಾದ: ಹಲ್ಲೆ ನಡೆಸಿ ಪರಾರಿಯಾಗಿದ್ದ ಡೆಲಿವರಿ ಬಾಯ್ ವಿರುದ್ಧ ಎಫ್‌ಐಆರ್

Date:

ವಿಳಾಸ ತಪ್ಪಾಗಿದ್ದಕ್ಕೆ ವಾಗ್ವಾದ ನಡೆದ ಬಳಿಕ ಗ್ರಾಹಕರೋರ್ವರ ಸಂಬಂಧಿಗೆ ಡೆಲಿವರಿ ಬಾಯ್ ಓರ್ವ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.

- Advertisement -

ಘಟನೆ ಮೇ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿನಸಿ ಸಾಮಗ್ರಿ ಡೆಲಿವರಿ ಮಾಡಲು ಬಂದಿದ್ದ ಝೆಫ್ಟೋ ಡೆಲಿವರಿ ಬಾಯ್ ವಿಷ್ಣುವರ್ಧನ್ ಎಂಬಾತ ಮಹಿಳಾ ಗ್ರಾಹಕರೋರ್ವರ ಸಂಬಂಧಿ ಶಶಾಂಕ್ ಎಂಬುವವರ ಕಣ್ಣಿಗೆ ಪಂಚ್ ಮಾಡಿ, ಹಲ್ಲೆ ನಡೆಸಿ, ಪರಾರಿಯಾಗಿದ್ದಾನೆ. ಶಶಾಂಕ್​ ಅವರ ಕಣ್ಣಿನ ಕೆಳಭಾಗದ ಮೂಳೆ ಮುರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಶಶಾಂಕ್ ಅವರ ನಾದಿನಿ ಝೆಪ್ಟೋದಲ್ಲಿ ದಿನಸಿ ಸಾಮಗ್ರಿ ಆರ್ಡರ್ ಮಾಡಿದ್ದರು. ಆರ್ಡರ್ ಡೆಲಿವರಿ ವಿಳಾಸ ಬದಲಾಗಿದ್ದಕ್ಕೆ ಡೆಲಿವರಿ ಬಾಯ್​ ವಿಷ್ಣುವರ್ಧನ್ ನಿಂದನೆ ಮಾಡಿದ್ದಾನೆ. ನಾದಿನಿಯನ್ನು ನಿಂದಿಸಿದ್ದಕ್ಕೆ ಮನೆಯಿಂದ ಹೊರಬಂದು ಶಶಾಂಕ್ ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಡೆಲಿವರಿ ಬಾಯ್ ವರ್ತನೆ ಕಂಡು ಶಶಾಂಕ್ ಪೊಲೀಸರಿಗೆ ಕರೆ ಮಾಡಲು ಮುಂದಾದರು.

ಪೊಲೀಸರ ಹೆಸರು ಹೇಳುತ್ತಿದ್ದಂತೆ ದ್ವಿಚಕ್ರ ವಾಹನದಿಂದ ಇಳಿದು ಬಂದು ಡಿಲಿವರಿ ಬಾಯ್​ ವಿಷ್ಣವರ್ಧನ್​ ಗ್ರಾಹಕ ಶಶಾಂಕ್​ ಅವರ ಕಣ್ಣಿಗೆ ಪಂಚ್ ಮಾಡಿದ್ದಾನೆ. ಇದರಿಂದ ಗ್ರಾಹಕ ಶಶಾಂಕ್ ಅವರ ಕಣ್ಣಿನ ಕೆಳ ಭಾಗದ ಮೂಳೆ ಮುರಿದಿದೆ. ಕಣ್ಣು ಮಂಜಾಗಿದ್ದು ದೃಷ್ಟಿ ಸ್ವಲ್ಪಮಟ್ಟಿಗೆ ಹಾನಿಯಾಗಿದೆ. ಇದೇ ಪರಿಸ್ಥಿತಿ ಇದ್ದಲ್ಲಿ ಅಪರೇಷನ್ ಮಾಡುವುದು ಅನಿವಾರ್ಯ ಎಂದು ವೈದ್ಯರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ ನಡೆಸಿದ ಬಿಜೆಪಿ ಮುಖಂಡ: ಸಿಸಿಟಿವಿ ದೃಶ್ಯ ವೈರಲ್; ಎಫ್‌ಐಆರ್

ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಷ್ಣವರ್ಧನ್​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಝೆಪ್ಟೋ ಕಂಪನಿಯ ವ್ಯವಸ್ಥಾಪಕರಿಗೆ ಶಶಾಂಕ್ ಕುಟುಂಬದವರು ದೂರು ನೀಡಿದ್ದಾಗ, ಉಡಾಫೆಯಿಂದ ವರ್ತಿಸಿರುವುದಾಗಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...