ಚಿತ್ರದುರ್ಗ | ಸೇನೆಯಲ್ಲಿ ಉದ್ಯೋಗ ಕೊಡಿಸುತ್ತೇನೆಂದು 150 ಜನರಿಗೆ ವಂಚನೆ; ಆರೋಪಿ ಬಂಧನ

Date:

Advertisements

ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 150 ಯುವಕರಿಂದ ಒಂದು ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ ಮತ್ತು ಆತನ ಸಂಗಾತಿ ಭೀಮವ್ವ ವಿರುದ್ಧ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೂಲತಃ ದಾವಣಗೆರೆ ಜಿಲ್ಲೆಯವನಾದ ಆರೋಪಿ ಶಿವರಾಜ್ ವಟಗಲ್ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಸುಳ್ಳು ಹೇಳಿ ಯುವಕರನ್ನು ನಂಬಿಸುತ್ತಿದ್ದ. ನಂಬಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ. ಭಾರತೀಯ ಸೇನೆ, ವಾಯುಸೇನೆ ಹಾಗೂ ನೌಕಾಪಡೆಯಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಹಣ ತೆಗೆದುಕೊಳ್ಳುತ್ತಿದ್ದ. ಈತನಿಂದ ವಂಚನೆಗೆ ಒಳಗಾದ ಪ್ರಕಾಶ್ ಎಂಬುವವರು  ಶಿವರಾಜ್ ವಟಗಲ್ ವಿರುದ್ಧ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಅಕ್ಟೋಬರ್ 20ರಂದು ಚಿತ್ರದುರ್ಗದಲ್ಲಿ ವಂಚಕ ಶಿವರಾಜ್​ ಮತ್ತು ಆತನ ಸಂಗಾತಿ ಭೀಮವ್ವರನ್ನು ಬಂಧಿಸಿ, ಆತನ ಬಳಿ ಇದ್ದ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ, ಚಿತ್ರದುರ್ಗ ಮಾತ್ರವಲ್ಲದೇ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶಿವರಾಜ ವಂಚನೆ ಮಾಡಿರುವುದು ಬಯಲಾಗಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X