ಬಿಬಿಎಂಪಿಯಲ್ಲಿ ಮಾರ್ಷಲ್‌ ನೌಕರಿ ಕೊಡಿಸುವುದಾಗಿ ವಂಚಿಸಿದ್ದ ಆರೋಪಿಯ ಬಂಧನ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲಸೂರುಗೇಟ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಇಲಾಖೆ (ಎಕ್ಸ್‌) ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದು, “ಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು, ವಂಚಿಸುತ್ತಿದ್ದ ಆರೋಪಿಯನ್ನು ಹಲಸೂರುಗೇಟ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ” ಎಂದು ಹೇಳಿದೆ.

“ಆರೋಪಿಯು ಬಿಬಿಎಂಪಿಯಲ್ಲಿ ತಾನು ಕೆಲಸ ಮಾಡಿಕೊಂಡಿರುವುದಾಗಿ ಸಂತ್ರಸ್ತರಿಗೆ ಹೇಳಿ ನಂಬಿಸಿದ್ದಾನೆ. ಬಿಬಿಎಂಪಿಯಲ್ಲಿ ನೇರ ನೇಮಕಾತಿ ಮೂಲಕ ಮಾರ್ಷಲ್‌ ನೌಕರಿಗೆ, ನೇಮಕ ಮಾಡಿಕೊಳ್ಳಲಾಗುತ್ತಿದೆ. ₹3,000 ಹಣವನ್ನು ನೀಡಿದರೆ, ನೇಮಕಾತಿ ಮಾಡಿಸುವುದಾಗಿ ನಂಬಿಸಿ, 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ₹3,000 ಹಣವನ್ನು ಫೋನ್ ಪೇ ಮೂಲಕ ಪಡೆದುಕೊಂಡಿದ್ದಾನೆ” ಎಂದು ತಿಳಿಸಿದೆ.

Advertisements

“ಅಲ್ಲದೇ, ನೇಮಕಾತಿ ಆದೇಶದ ನಕಲಿ ಪ್ರತಿಗಳನ್ನು ಸೃಷ್ಟಿಸಿ, ಅವುಗಳನ್ನೇ ಅಸಲಿ ಆದೇಶ ಪತ್ರಗಳೆಂದು ಬಿಂಬಿಸಿ, ವಾಟ್ಸಆಪ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಳುಹಿಸಿಕೊಟ್ಟಿದ್ದಾನೆ” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 18 ಮಾದರಿಯಲ್ಲಿ ​​​ಸೈಬರ್​​ ಕ್ರೈಂ; ಬರೋಬ್ಬರಿ ₹470 ಕೋಟಿ ವಂಚನೆ

ಈ ಕುರಿತು ಹಲಸೂರುಗೇಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ಆತನಿಂದ ಅಗತ್ಯ ದಾಖಲೆಗಳನ್ನು‌ ವಶಪಡಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X