ಮಳವಳ್ಳಿ | ರಂಗಭೂಮಿಯ ಪಾಲನೆ, ಪೋಷಣೆ ಕಲಾವಿದರ ಹೊಣೆ : ನಟಿ ಉಮಾಶ್ರೀ

Date:

Advertisements

ರಂಗಭೂಮಿಯ ಪಾಲನೆ ಮತ್ತು ಪೋಷಣೆಯ ಹೊಣೆಗಾರಿಕೆ ಕಲಾವಿದರು ಮತ್ತು ಕಲಾಪೋಷಕರ ಮೇಲಿದ್ದು, ದಿಟವಾದ ಕಲೆಯನ್ನು ಬೆಳೆಸಬೇಕಾದ ಅಗತ್ಯತೆಯಿದೆ ಎಂದು ನಟಿ ಉಮಾಶ್ರೀ ಅಭಿಪ್ರಾಯಪಟ್ಟರು.

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಳವಳ್ಳಿ ಸುಂದರಮ್ಮ ಸ್ಮರಣಾರ್ಥ ಗುರುವಾರ ಆಯೋಜಿಸಿದ್ದ ರಂಗೋತ್ಸವ ಸಮಾರಂಭದಲ್ಲಿ ರಂಗಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದರು.

ಸಿನಿಮಾ ಮತ್ತು ಧಾರಾವಾಹಿಗಳೆರಡೂ ರಂಗಭೂಮಿಯಿಂದಲೇ ಬೆಳೆದುಬಂದಿದ್ದು. ಅಂದಿನ ಕಾಲದಲ್ಲಿ ಸ್ತ್ರೀ ಪಾತ್ರಗಳನ್ನು ಪುರುಷರು ನಿರ್ವಹಿಸುತ್ತಿದ್ದರು. ಆದರೆ, ಮಳವಳ್ಳಿ ಸುಂದರಮ್ಮ ಅವರು ಸ್ತ್ರೀ ಪಾತ್ರಗಳನ್ನು ನಿರ್ವಹಿಸುವ ಮೂಲಕ ರಂಗಭೂಮಿಗೆ ಹೊಸ ತಿರುವು ನೀಡಿದರು ಎಂದು ಸ್ಮರಿಸಿದರು.

Advertisements
Rangabandi
ಮಳವಳ್ಳಿಯಲ್ಲಿ ಆಯೋಜಿಸಿದ್ದ ರಂಗೋತ್ಸವ ಸಮಾರಂಭದಲ್ಲಿ ನಟಿ ಉಮಾಶ್ರೀ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ.ರಾಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಮಳವಳ್ಳಿ ಶಿವಣ್ಣ ಮಾತನಾಡಿ, ಮಳವಳ್ಳಿ ತಾಲೂಕು ಮಂಟೇಸ್ವಾಮಿ, ಸಿದ್ದಪ್ಪಾಜಿ ಮತ್ತು ಮಹದೇಶ್ವರರ ನಾಡಾಗಿದ್ದು, ಈ ನಾಡು ಹಲವು ಪ್ರತಿಭಾವಂತ ಕಲಾವಿದರನ್ನು ದತ್ತು ಪಡೆದಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿಗಳಿಂದ ಪೂರ್ವಭಾವಿ ಸಭೆ

ರಂಗೋತ್ಸವ ಸಮಾರಂಭದಲ್ಲಿ ರಂಗ ಕಲಾವಿದರಾದ ಶ್ರೀನಿವಾಸ ಜಿ ಕಪ್ಪಣ್ಣ, ಲೋಕೇಶ್ ಮತ್ತು ಮಳವಳ್ಳಿ ಸುಂದರಮ್ಮ ಕುಟುಂಬಸ್ಥರು, ರಂಗ ಬಂಡಿಯ ಮಧು, ಸಂಘಟಕರಾದ ಎನ್ ಎಲ್ ಭರತ್‌ ರಾಜ್ ಮುಂತಾದವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X