ವಿಶ್ವ ಶಿಟೊರಿಯೋ ಕರಾಟೆ ಮಂಡಳಿ ನಿರ್ದೇಶಕರಾಗಿ ಅರುಣ್ ಮಾಚಯ್ಯ ಆಯ್ಕೆ

Date:

Advertisements

ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ನೂತನ ಸ್ಟ್ಯಾಂಡಿಂಗ್ ನಿರ್ದೇಶಕರಾಗಿ ಅಖಿಲ ಭಾರತ ಶಿಟೋರಿಯೋ ಕರಾಟೆ ಸಂಸ್ಥೆಯ ಅಧ್ಯಕ್ಷ, ಭಾರತದ ಹಿರಿಯ ಕರಾಟೆಪಟು ಕೊಡಗಿನ ಚೆಪ್ಪುಡಿರ ಎಸ್ ಅರುಣ್ ಮಾಚಯ್ಯ ಆಯ್ಕೆಯಾಗಿದ್ದಾರೆ.

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 10ನೇ ಅಂತರಾಷ್ಟ್ರೀಯ ಶಿಟೋರಿಯೋ ಕರಾಟೆ ಚಾಂಪಿಯನ್ಶಿಪ್‌ನ ಅಂಗವಾಗಿ ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ಚುನಾವಣಾ ಪ್ರಕ್ರಿಯೆ ಸಭೆ ನಡೆದಿದೆ. ಸಭೆಯಲ್ಲಿ ಅರುಣ್ ಮಾಚಯ್ಯ ಅವರನ್ನು ಏಷ್ಯಾ ಮತ್ತು ಪೆಸಿಫಿಕ್ ಖಂಡದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ, ಈ ಬಗ್ಗೆ ಕರಾಟೆ ಮಂಡಳಿಯ ಅಧ್ಯಕ್ಷ ಕೆನ್ ಜೋ ಈವಾಟ್ ಅವರು ಪ್ರಕಟಿಸಿದ್ದಾರೆ.

ಅರುಣ್ ಮಾಚಯ್ಯ ಅವರು ಮುಂದಿನ ಮೂರು ವರ್ಷಗಳ ಕಾಲ ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ಸ್ಟ್ಯಾಂಡಿಂಗ್ ನಿರ್ದೇಶಕರಾಗಿ ವಿಶ್ವಮಟ್ಟದಲ್ಲಿ ಏಷ್ಯಾ ಮತ್ತು ಪೆಸಿಫಿಕ್ ಖಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಹಿಂದೆಯೂ ಇವರು 1996ರಿಂದ 2002ರವರೆಗೆ ಇದೇ ಹುದ್ದೆಯನ್ನು ಅಲಂಕರಿಸಿದ್ದರು. ಇದೀಗ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅಲ್ಲದೆ ವಿಶ್ವ ಕರಾಟೆ ಮಂಡಳಿಯಲ್ಲಿ 2ನೇ ಬಾರಿಗೆ ನಿರ್ದೇಶಕರಾಗಿರುವ ಭಾರತದ ಮೊದಲ ಕರಾಟೆಪಟು ಎಂಬ ಹೆಗ್ಗಳಿಕೆಗೂ ಅರುಣ್ ಮಾಚಯ್ಯ ಪಾತ್ರರಾಗಿದ್ದಾರೆ.

Advertisements

ಕಳೆದ ಐದು ದಶಕಗಳಿಂದ ಕರಾಟೆ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಅದರ ಉನ್ನತಿಗೆ ಕಾರಣರಾಗಿರುವ ಅರುಣ್ ಮಾಚಯ್ಯ ಅವರು, ಪ್ರಸ್ತುತ ಅಖಿಲ ಭಾರತ ಶಿಟಾರಿಯೋ ಕರಾಟೆ ಸಂಸ್ಥೆಯ ಮತ್ತು ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರಾಗಿ, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಿರಿಯ ಉಪಾಧ್ಯಕ್ಷರಾಗಿ, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಂತರಾಷ್ಟ್ರೀಯ ಕರಾಟೆ ತೀರ್ಪುಗಾರರಾಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಕರಾಟೆಯಲ್ಲಿ 8ನೇ ಡ್ಯಾನ್ ಬ್ಲಾಕ್ ಬೆಲ್ಟ್ ಪದವೀಧರಾಗಿದ್ದಾರೆ. 2022ರಲ್ಲಿ ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಅರುಣ್ ಮಾಚಯ್ಯ, ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X