ಚಿಕ್ಕಮಗಳೂರು | ದಲಿತ ಯುವಕನ ಮೇಲೆ ಹಲ್ಲೆ; ನಾಲ್ವರು ಆರೋಪಿಗಳ ಬಂಧನ

Date:

Advertisements

ಗೊಲ್ಲರ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೇರಮರಡಿ ಗ್ರಾಮದ ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಜನವರಿ 1ರಂದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಮನೆ ಕೆಡವುವ ಕೆಲಸಕ್ಕೆ ಎಂ.ಸಿ ಹಳ್ಳಿ ಗ್ರಾಮದ ಮಾದಿಗ ಸಮುದಾಯದ ಯುವಕ ಮಾರುತಿ ತೆರಳಿದ್ದರು. ಈ ವೇಳೆ, ಜೆಸಿಬಿಗೆ ಡಿಶ್‌ ವೈರ್ ತಗುಲಿ, ವೈರ್‌ ತುಂಡಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಆತನ ಮೇಲೆ ಹಲ್ಲೆ ಗೊಲ್ಲ ಸಮುದಾಯದ ಗುಂಪು, ‘ಮಾದಿಗ ಸಮುದಾಯವರು ನಮ್ಮ ಬೀದಿಗೆ ಯಾಕೆ ಬಂದಿದ್ದೀರಿ. ನೀವು ಬಂದರೆ ನಮ್ಮ ದೇವರಿಗೆ ಮೈಲಿಗೆಯಾಗುತ್ತದೆ’ ಎಂದು ಹತ್ತಿ ಹಲ್ಲೆ ಮಾಡಿತ್ತು. ಕೆಲವರು ಚಪ್ಪಲಿ ಹಾಕಿದ್ದ ಕಾಲಿನಿಂದ ಒದ್ದಿದ್ದರು.

ಮಾತ್ರವಲ್ಲದೆ, ಆತನ ಜೇಬಿನಲ್ಲಿದ್ದ 20,000 ರೂಪಾಯಿಯನ್ನು ಕಸಿದುಕೊಂಡು, 1 ಲಕ್ಷ ರೂ. ದಂಡ ಕಟ್ಟಬೇಕು. ಇಲ್ಲವಾದಲ್ಲಿ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು.

Advertisements

ಸಂತ್ರಸ್ತ ಯುವಕ ಮಾರುತಿ ತರೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆತನ ದೂರಿನ ಆಧಾರದ ಮೇಲೆ 15 ಮಂದಿ ವಿರುದ್ಧ ಐಪಿಸಿ ಸೆಕ್ಷನ್‌ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್​ಐಆರ್​ ದಾಖಲಾಗಿತ್ತು.

ತನಿಖೆ ನಡೆಸುತ್ತಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ 11 ಮಂದಿ ಆರೋಪಿಗಳ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X