ಕಲಬುರಗಿ |ಚಾಕುವಿನಿಂದ ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆ ಹಲ್ಲೆಗೆ ಯತ್ನ; ಕಾಲಿಗೆ ಗುಂಡಿಕ್ಕಿ ಡ್ರಗ್ ಸ್ಮಗ್ಲರ್ ಬಂಧಿಸಿದ ಪೊಲೀಸರು

Date:

Advertisements

ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಓರ್ವನನ್ನು ಬಂಧಿಸಲು ಪ್ರಯತ್ನಿಸಿದ ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯಲ್ಲಿ ಶನಿವಾರ ನಡೆದಿದೆ.

ಪೊಲೀಸರು ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ತಿಳಿಸಿದ್ದಾರೆ.

ʼಅನುಮಾನಾಸ್ಪದ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆದ ಇನ್ಸ್‌ಪೆಕ್ಟರ್ ಚೌಕ್ ರಾಜೇಂದ್ರ ಅವರು ಅಪರಾಧ ಪತ್ತೆ ತಂಡದೊಂದಿಗೆ ತನಿಖೆಗೆ ತೆರಳಿದರು. ಈ ವೇಳೆ ಕಾರಿನಲ್ಲಿದ್ದ ಶಂಕಿತನನ್ನು ನೋಡಿದ ಇನ್ಸ್‌ಪೆಕ್ಟರ್ ಕಾರು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ತಕ್ಷಣ ಶಂಕಿತನು ಕಾರಿನಿಂದ ಹೊರಬಂದು ಹೆಡ್ ಕಾನ್ಸ್‌ಟೇಬಲ್ ಗುರುಮೂರ್ತಿ ಮೇಲೆ ದಾಳಿ ಮಾಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆʼ ಎಂದು ಕಮಿಷನರ್ ಹೇಳಿದರು.

Advertisements

ಆರೋಪಿ ಸುಪ್ರೀತ್ ನವಲೆ ಕಲಬುರಗಿ ನಗರದ ಮುತ್ತಂಪುರ ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನ ಕಾರನ್ನು ತಪಾಸಣೆ ನಡೆಸಿದಾಗ ನೈಟ್ರೊವೆಟ್ ಮಾತ್ರೆಗಳು ಸೇರಿದಂತೆ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ| ದಲಿತ ವ್ಯಕ್ತಿಯನ್ನು ತಲೆಕೆಳಗಾಗಿ ನೇತಾಡಿಸಿ ಹಲ್ಲೆ

ಘಟನೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಗುರುಮೂರ್ತಿ ಅವರ ಎಡಗೈಗೆ ಗಾಯವಾಗಿದೆ. ಗಾಯಗೊಂಡ ಗುರುಮೂರ್ತಿ ಮತ್ತು ಆರೋಪಿಗಳನ್ನು ಕಲಬುರಗಿಯ ಜಿಮ್ಸ್ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್‌.ಡಿ. ಆಸ್ಪತ್ರೆಗೆ ಭೇಟಿ ಘಟನೆ ಮಾಹಿತಿ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X