ಔರಾದ್‌ | ಸತತ ಮಳೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ

Date:

Advertisements

ಔರಾದ್‌ (ಬಾ) ತಾಲೂಕಿನಲ್ಲಿ ರಾತ್ರಿಯಿಂದ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್‌ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು ಗುರುವಾರ (ಆ.28) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್‌ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರು ಮೌಖಿಕ ಆದೇಶ ಹೊರಡಿಸಿದ್ದಾರೆ.

ತೀವ್ರವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಔರಾದ್‌ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಎಂದು ಗುರುವಾರ ಬೆಳಿಗ್ಗೆ ತಹಸೀಲ್ದಾರ್‌ ಅವರು ತಿಳಿಸಿದ್ದಾರೆ.

ಕಮಲನಗರ ತಾಲೂಕಿನ ಶಾಲೆಗಳಿಗೆ ರಜೆ :

ʼಕಮಲನಗರ ತಾಲೂಕಿನಲ್ಲಿ ಸತತ ಮಳೆ ಮುಂದುವರೆದ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಇಂದು (ಆ.28) ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ’ ಎಂದು ಕಮಲನಗರ ತಹಸೀಲ್ದಾರ್‌ ಅಮಿತ್‌ ಕುಲಕರ್ಣಿ ‘ಈದಿನ’ಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ : ಔರಾದ್ ಸೀಮೆಯ ಕನ್ನಡ | ದನ ಕಾಯೋರು ತಿಂಗಳಿಗೆ ಪಗಾರ್‌ ಎಷ್ಟು ತಕೋತಾರ್‌ ಗೊತ್ತಾ!

ಕಳೆದ ಆ.18 ಹಾಗೂ 19ರಂದು ಕಮಲನಗರ ಹಾಗೂ ಔರಾದ್‌ ಹಾಗೂ ಕಮಲನಗರ ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದ ಹಿನ್ನೆಲೆ ಸತತ ಎರಡು ದಿನ ಅಂಗನವಾಡಿ ಸೇರಿದಂತೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X