ಬೆಂ. ಗ್ರಾಮಾಂತರ | ಮಕ್ಕಳ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ಅಪರ ಜಿಲ್ಲಾಧಿಕಾರಿ

Date:

Advertisements

ಸಮಾಜದಲ್ಲಿ ಮಕ್ಕಳ ಮೇಲೆ ದೌರ್ಜನ್ಯ, ಶೋಷಣೆಗಳು ನಡೆಯುತ್ತಿವೆ. ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶಾಲಾ, ಕಾಲೇಜುಗಳು, ಪಂಚಾಯತಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಹೇಳಿದರು.

ದೇವನಹಳ್ಳಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಲಾಗಿದೆ. ಅಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಹಕಾರದಿಂದ ಮಕ್ಕಳ ರಕ್ಷಣೆ ಸಾಧ್ಯ” ಎಂದರು.

Advertisements

“ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಪ್ರಕರಣಗಳನ್ನು ತಡೆದು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.

“ಮಕ್ಕಳ ಭಿಕ್ಷಾಟನೆ, ಬಾಲಕಾರ್ಮಿಕ, ಶಿಕ್ಷಣ ವಂಚಿತ ಮಕ್ಕಳು, ಲೈಂಗಿಕ ದೌರ್ಜನ್ಯ, ಕಾಣೆಯಾದ ಮಕ್ಕಳು ಮುಂತಾದ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂಖ್ಯೆಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು” ಎಂದು ಸಲಹೆ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ, ಜಿಲ್ಲಾಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರಾಮು, ವಿಶ್ವನಾಥಪುರ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಜಿಲ್ಲೆ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X