ಚಿತ್ರದುರ್ಗ | ಸಂಚಾರ ನಿಯಮಗಳ ಕುರಿತು ಪೊಲೀಸರಿಂದ ಅರಿವು ಕಾರ್ಯಕ್ರಮ

Date:

Advertisements

ಸಂಚಾರ ನಿಯಮಗಳ ಪಾಲನೆ ಎಲ್ಲರ ಕರ್ತವ್ಯ, ವಾಹನ ಮಾಲೀಕರು, ಚಾಲಕರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ರಸ್ತೆಯಲ್ಲಿ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು. ಆಗ ಮಾತ್ರ ಎಲ್ಲರ ಸುರಕ್ಷತೆ ಸಾಧ್ಯ ಎಂದು ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪೊಲೀಸ್ ಠಾಣೆಯ ಉಪನಿರೀಕ್ಷಕಿ ದೀಪು ಎಂ ಟಿ ಹೇಳಿದ್ದಾರೆ.

ಚಿಕ್ಕಜಾಜೂರಿನಲ್ಲಿ ನಡೆದ ಸಂಚಾರ ನಿಯಮಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಾರ್ವಜನಿಕರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು, ರಸ್ತೆ ನಿಯಮಗಳ ಪಾಲನೆ ಮಾಡದಿರುವುದು ವಾಹನದಟ್ಟಣೆ ಮತ್ತು ಅಪಘಾತ ಇನ್ನಿತರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದನ್ನು ಅರಿತು ವಾಹನ ಮಾಲೀಕರು, ಚಾಲಕರು ನಿಗದಿತ ಸ್ಥಳಗಳಲ್ಲಿ ವಾಹನವನ್ನು ನಿಲುಗಡೆ ಮಾಡಬೇಕು” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇದೇ ಸಮಯದಲ್ಲಿ ವ್ಯಾಪಾರಿ ಮಳಿಗೆ ಮಾಲೀಕರು, ಆಟೋ ನಿಲ್ದಾಣ ಮತ್ತು ಬಸ್ ನಿಲುಗಡೆ ಕೆಲವು ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸೂಚಿಸಿದರು. ಚಿಕ್ಕಜಾಜೂರು ಠಾಣಾ ವ್ಯಾಪ್ತಿಯಲ್ಲಿ ನೊಂದಣಿಯಾದ ಆಟೋಗಳಿಗೆ ರಿಜಿಸ್ಟರ್ ನಂಬರ್‌ನ ಫಲಕಗಳನ್ನು ವಿತರಿಸಿದರು.

Advertisements

ಕಾರ್ಯಕ್ರಮದಲ್ಲಿ ಉಪನಿರೀಕ್ಷಕರಾದ ಸಚಿನ್ ಪಟೇಲ್, ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲೇಶ್, ರುದ್ರೇಶ್, ಗಿರೀಶ್ ಸೇರಿದಂತೆ ಆಟೋ ಚಾಲಕರಾದ ವಿಜಯ್ ಅಪ್ಪಿ, ಉಮೇಶ್ ಹಾಗೂ ಸ್ಥಳೀಯ ನಿವಾಸಿ ಸೋಮು ಬಾಬು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X