ರಾಮನಗರ | ಅಕ್ರಮ ಮದ್ಯ ಮಾರಾಟದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

Date:

“ಹೊಸದುರ್ಗವು ಪುರಾತನ ಹಿನ್ನೆಲೆಯನ್ನು ಹೊಂದಿದ್ದು, ಈ ಪಾವಿತ್ರ್ಯತೆಗೆ ಅಕ್ರಮ ಮದ್ಯ ಮಾರಾಟವು ಕಪ್ಪು ಚುಕ್ಕೆಯಾಗಿದೆ. ಅದನ್ನು ತೊಡೆದು ಹಾಕುವ ದೃಷ್ಟಿಯಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಜೀವನ ಟ್ರಸ್ಟ್‌ನ ಅಧ್ಯಕ್ಷ ಪ್ರಶಾಂತ್ ಹೊಸದುರ್ಗ ತಿಳಿಸಿದರು.

- Advertisement -

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹೊಸದುರ್ಗ ಗ್ರಾಮದಲ್ಲಿ ಜೀವನ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ 8ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀರಾಮಚಂದ್ರ ಗುಡಿಯ ಆವರಣದಲ್ಲಿ “ಅಕ್ರಮ ಮದ್ಯ ಮಾರಾಟದಿಂದ ಗ್ರಾಮೀಣ ಪ್ರದೇಶದ ಜನರ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮತ್ತು ಜಾಗೃತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಧಮ್ಮ ದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, “ಐದು ಸಾವಿರ ವರ್ಷಗಳ ಹಿಂದೆಯೇ ಭಗವಾನ್ ಬುದ್ದರು ಮದ್ಯ ಮಾದಕಗಳ ಸೇವನೆಯನ್ನು ಮಾಡದ ಶುದ್ಧ ಜೀವನ ನಡೆಸುವ ಶಪಥವನ್ನು ನನಗೆ ನಾನೇ ಹಾಕಿಕೊಳ್ಳುತ್ತೇನೆ ಎಂಬ ತತ್ವವನ್ನು ಸಾರಿ ಜೀವನದ ಮೌಲ್ಯವನ್ನು ಸಾರಿದ್ದರು. ಇಂದು ಅದನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ” ಎಂದರು.

photo 6167830267398570701 y

ಅಧ್ಯಕ್ಷ್ಯತೆ ವಹಿಸಿ ಮಾತನಾಡಿದ ಪಂಚಾಯತಿ ಅಧ್ಯಕ್ಷರಾದ ರಮೇಶ್, “ಗ್ರಾಮೀಣ ಜನರ ಆರೋಗ್ಯ ನೈರ್ಮಲ್ಯದ ಜೊತೆಗೆ ಜನ ಬದುಕಿಗೆ ಉತ್ತಮ ವಾತಾವರಣ ಕಲ್ಪಿಸುವುದು ಗ್ರಾಮ ಪಂಚಾಯತಿಯ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಹೊಸದುರ್ಗ ಗ್ರಾಮ ಪಂಚಾಯತಿಯ ಸರ್ವ ಸದಸ್ಯರ ನಿರ್ಣಯ ಕೈಗೊಂಡಿದ್ದು, ಮುಂದೆ ಯಾರಾದರೂ ಅಕ್ರಮ ಮದ್ಯ ಮಾರಾಟ ಕಂಡುಬಂದರೆ ಮಾರಾಟಗಾರರು, ಹಾಗೂ ಪೂರೈಕೆದಾರರ ಎದುರು ದಂಡ ಇಲ್ಲವೇ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಇಡೀ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಇನ್ನು ಮುಂದೆ ಅಕ್ರಮ ಮದ್ಯ ಮಾರಾಟ ನಿಷೇಧಿಸಿದ್ದೇವೆ. ಈ ನಿರ್ಣಯ ಕೈಗೊಂಡ ತಾಲೂಕಿನ ಮೊದಲ ಪಂಚಾಯತಿ ನಮ್ಮದಾಗಿದೆ” ಎಂದರು.

ಅಬಕಾರಿ ಅಧೀಕ್ಷಕರಾದ ಪ್ರದೀಪ್ ಮಾತನಾಡಿ, “ಅಕ್ರಮ ಮದ್ಯ ಮಾರಾಟದ ಮಾಹಿತಿ ನೀಡಿದರೆ ನಾವು ಕ್ರಮ ಕೈಗೊಳ್ಳಲು ಸಿದ್ದ” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕವಿಯತ್ರಿ , ಲೇಖಕಿ ರೂಪ ಹೊಸದುರ್ಗ ರವರಿಗೆ “ಜೀವನ ಸಾಹಿತ್ಯ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರಘು, ನಾರಾಯಣ, ಗ್ರಾಮ ಪಂಚಾಯತಿ ಸದಸ್ಯರಾದ ರಾಮಚಂದ್ರ, ನಾಗರಾಜ್ , ಗ್ರಾಮದ ಮುಖಂಡರಾದ ಮಲ್ಲೇಶ್, ಪುಟ್ಟೇಗೌಡ, ಗೋವಿಂದಯ್ಯ, ರವಿಕುಮಾರ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

photo 6167830267398570704 y
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...