ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಬಿ ಎ ರಮೇಶ್ ಹೆಗ್ಡೆ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿನಯ್ ಕುಮಾರ್ ಸೊರಕೆಯವರು ಪತ್ರಿಕಾ ಪ್ರಕಟಣೆ ತಿಳಿಸಿದ್ದು, “ತಾವುಗಳು ಕೂಡಲೇ ತಮಗೆ ವಹಿಸಿರುವ ಜವಾಬ್ದಾರಿಯನ್ನು ಕೈಗೆತ್ತಿಕೊಂಡು ಜಿಲ್ಲಾ ನಾಯಕರುಗಳ ಮಾರ್ಗದರ್ಶನದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಅತ್ಯಂತ ಕ್ರಿಯಾಶೀಲರಾಗಿ ಚುನಾವಣಾ ಪ್ರಚಾರವನ್ನು ಕೈಗೊಳ್ಳಬೇಕು” ಎಂದು ಬಿ ಎ ರಮೇಶ್ ಹೆಗ್ಡೆ ಅವರಿಗೆ ತಿಳಿಸಿದ್ದಾರೆ.
“ತಾವು ಕೈಗೊಂಡ ಪ್ರಚಾರ ಕಾರ್ಯಕ್ರಮಗಳ ವರದಿಯನ್ನು ವಾರಕ್ಕೊಂದು ಬಾರಿಯಾದರೂ ಕೆಪಿಸಿಸಿ ಕಚೇರಿಯಲ್ಲಿರುವ ಅಥವಾ email raveeshhv04@gmail.com watsapp no 9008889004ಕ್ಕೆ ತಲುಪಿಸಬೇಕು” ಎಂದು ಕೋರಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಸವರಾಜ ಪಾಟೀಲ್ ಇಟಗಿ ನೇಮಕ
“ಸ್ಥಳೀಯ ನಾಯಕರುಗಳೊಂದಿಗೆ ಸಮಾಲೋಚಿಸಿ ಜಿಲ್ಲಾ ಪ್ರಚಾರ ಸಮಿತಿ ಪದಾಧಿಕಾರಿಗಳ ಪಟ್ಟಿ, ಅಸೆಂಬ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿಯನ್ನು ಈ ಕೂಡಲೇ ಕಳುಹಿಸಿಕೊಡಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
