ಹೇಳಿಕೆ ವಾಪಸ್ ಪಡೆಯುವ ಜಾಯಮಾನ ನನ್ನದಲ್ಲ: ಬಿ ಕೆ ಹರಿಪ್ರಸಾದ್

Date:

  • ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಪರಿಷತ್ ಸದಸ್ಯ
  • ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಹರಿಪ್ರಸಾದ್ ಪಾತ್ರ ಕೂಡ ಇದೆ: ಪ್ರಣವಾನಂದ ಸ್ವಾಮೀಜಿ

‘ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಚೆನ್ನಾಗಿ ಗೊತ್ತು’ ಎಂಬ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ‘ನಾನು ಒಂದು ಪದ ಹೇಳಿದ್ದಿದ್ದರೆ ಅದನ್ನು ಹೇಳಿದ್ದೀನಿ ಅಂತ ಹೇಳ್ತೀನೇ ಹೊರತು, ಹೇಳಿಕೆಗಳನ್ನು ವಾಪಸ್ ಪಡೆಯುವ ಜಾಯಮಾನ ನನ್ನದಲ್ಲ’ ಎಂದು ತಿಳಿಸಿದ್ದಾರೆ.

- Advertisement -

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿನ್ನೆ(ಜು.21) ನಡೆದಿದ್ದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಕರಾವಳಿ ಮೂಲದ ಬಿಲ್ಲವ ಮುಖಂಡ ಹರಿಪ್ರಸಾದ್, ‘ನಾನು ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ. ಐವರನ್ನು ಸಿಎಂ ಆಯ್ಕೆ ಮಾಡುವುದರಲ್ಲಿ ನಾನು ಪಾತ್ರ ವಹಿಸಿದ್ದೇನೆ. ಮುಖ್ಯಮಂತ್ರಿ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ನನಗೆ ಚೆನ್ನಾಗಿ ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ’ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಅವರ ಈ ಹೇಳಿಕೆಯನ್ನು ಸಭೆಯಲ್ಲಿದ್ದವರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ಬಳಿಕ ಅದು ಸೋಷಿಯಲ್ ಮೀಡಿಯಾ ಸೇರಿದಂತೆ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಇದನ್ನು ಓದಿದ್ದೀರಾ? ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಚೆನ್ನಾಗಿ ಗೊತ್ತು : ಸಿಎಂ ವಿರುದ್ಧ ಪರೋಕ್ಷ ಬಾಣ ಬಿಟ್ಟ ಬಿ ಕೆ ಹರಿಪ್ರಸಾದ್

ಈ ಹೇಳಿಕೆ ಬಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್‌, ‘ಸಮುದಾಯದ ಸಭೆ ಇದೆ ಎಂದು ಸ್ವಾಮೀಜಿಗಳು ಕರೆದಿದ್ದರು. ಅದಕ್ಕಾಗಿ ಹೋಗಿ ಮಾತನಾಡಿದ್ದೆ. ಒಂದು ಪದ ಹೇಳಿದ್ದಿದ್ದರೆ ಅದನ್ನು ವಾಪಸ್ ತಗೊಂಡಿರೋ ಜಾಯಮಾನ ನನ್ನದಲ್ಲ. ಹೇಳಿದ್ದು ವಾಪಸ್ ತಗೊಳ್ಳಲ್ಲ. ಹೇಳದೇ ಇರೋದನ್ನು ಹೇಳೋದಕ್ಕೆ ಹೋಗಲ್ಲ. ಇದನ್ನು ಮತ್ತೆ ಮುಂದುವರಿಸುವುದಕ್ಕೂ ಹೋಗಲ್ಲ’ ಎಂದು ತಿಳಿಸಿದ್ದಾರೆ.

‘ಸಭೆಯಲ್ಲಿ ಕ್ಯಾಮರಾ ಇರಲಿಲ್ಲ ಅಂತ ಸ್ವಲ್ಪ ಏನೋ ಮಾತನಾಡಿದ್ದೆ. ಕ್ಯಾಮರಾ ಇದ್ದಾಗ ಎಷ್ಟು ಮಾತನಾಡಬೇಕೋ ಅಷ್ಟನ್ನೇ ಮಾತನಾಡ್ತೀನಿ. ನಾನು ಮಾತನಾಡಿದ್ದನ್ನು ಯಾರೋ ಮೊಬೈಲ್‌ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡು, ಬಳಿಕ ಫೇಸ್‌ಬುಕ್‌ನಲ್ಲಿ ಹಾಕಿದ್ದಾರೆ’ ಎಂದು ಹೇಳುವ ಮೂಲಕ ತಾವು ಮಾತನಾಡಿರುವುದನ್ನು ನೇರವಾಗಿಯೇ ಒಪ್ಪಿಕೊಂಡಿದ್ದಾರೆ.

ಇದು ಅಸಮಾಧಾನವೇ ಎಂದು ಪ್ರಶ್ನಿಸಿದಾಗ, ‘ರಾಜಕಾರಣದಲ್ಲಿ ಅಸಮಾಧಾನದ ಪ್ರಶ್ನೆ ಇರೋದೇ ಇಲ್ಲ. ನನ್ನ ಜೀವನದಲ್ಲಿ ಆಗಲೇ ಇಲ್ಲ. ನಾನು ಮಂತ್ರಿ ಸ್ಥಾನಕ್ಕೂ ಲಾಬಿ ನಡೆಸಿದವನಲ್ಲ. ಇದನ್ನು ಮೊದಲೇ ಹೇಳಿದ್ದೇನೆ. ಮುಂದೆ ಬಹಳ ಮಜಾ ಇರುತ್ತದೆ. ಎಲ್ಲವನ್ನೂ ಒಂದೇ ದಿವಸಕ್ಕೆ ಮುಗಿಸಿಬಿಟ್ಟರೆ ಹೇಗೆ’ ಎಂದು ಮಾಧ್ಯಮದವರಿಗೆ ಹೇಳುವ ಮೂಲಕ ಬಿ ಕೆ ಹರಿಪ್ರಸಾದ್ ಕುತೂಹಲ ಸೃಷ್ಟಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಹರಿಪ್ರಸಾದ್ ಪಾತ್ರ ಕೂಡ ಇದೆ : ಪ್ರಣವಾನಂದ ಸ್ವಾಮೀಜಿ

“ಬಿ.ಕೆ ಹರಿಪ್ರಸಾದ್ 49 ವರ್ಷ ಸುದೀರ್ಘ ರಾಜಕಾರಣ ನಡೆಸಿದವರು. ಯಾವುದೇ ಜಾತಿ ರಾಜಕಾರಣ, ಕಳಂಕ ಇಲ್ಲ ವ್ಯಕ್ತಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಕೆಶಿ, ಸಿದ್ದರಾಮಯ್ಯ ಹಾಗೂ ಬಿ ಕೆ ಹರಿಪ್ರಸಾದ್ ಪಾತ್ರ ದೊಡ್ಡದು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಮೊದಲು ಎಂಟು ಮಂದಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭ ಹರಿಪ್ರಸಾದ್ ಕೂಡ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಆದರೆ ಅದು ಆಗಲಿಲ್ಲ. ಈ ವಿಚಾರವನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರ ಗಮನಕ್ಕೂ ತಂದಿದ್ದೆ. ಆದರೂ ಅವರನ್ನು ವ್ಯವಸ್ಥಿತವಾಗಿ ಕಡೆಗಣಿಸಲಾಗಿದೆ. ಇದು ಈಡಿಗ, ಬಿಲ್ಲವ, ದೀವರ ಸಮಾಜಕ್ಕೆ ಆದ ಅವಮಾನ” ಎಂದು ಬ್ರಹ್ಮರ್ಶಿ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

WhatsApp Image 2023 07 22 at 1.42.30 PM

ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಸುಮಾರು 40 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕಾಗಿ ನಮ್ಮ ಸಮುದಾಯ ದುಡಿದಿದೆ. ನಮಗೆ 11 ಸೀಟು ಫಿಕ್ಸ್ ಇತ್ತು. ಈ ಬಾರಿಯ ಚುನಾವಣೆಯಲ್ಲಿಯೂ ಮಂಗಳೂರು, ಗಂಗಾವತಿ, ಕುಮಟಾದಲ್ಲಿ ಎರಡು ಸೀಟು ಸೇರಿ ನಾಲ್ಕು ಸೀಟು ಕೊಡಬೇಕಿತ್ತು. ಕರಾವಳಿಯಲ್ಲಿ ಮೂರು ಸೀಟು ಕೊಟ್ಟರೂ ಗೆದ್ದಿಲ್ಲವಲ್ಲ ಎಂದು ನನಗೆ ನೇರವಾಗಿ ಕೇಳುತ್ತಾರೆ. ನಮ್ಮ ಸೀಟುಗಳನ್ನು ಬೇರೆಯವರಿಗೆ ಕೊಟ್ಟಾಗ ನಮ್ಮ ಸಮುದಾಯದಲ್ಲಿ ಗೊಂದಲ ಉಂಟಾಗುತ್ತದೆ. ನಮ್ಮ ಹಕ್ಕುಗಳಿಗೆ ನಾವು ಹೋರಾಟ ಮಾಡುತ್ತೇವೆ. ನಮ್ಮನ್ನು ಕಡೆಗಣಿಸಲಾಗ್ತಿದೆ. ಇದು ನಮಗೆ ನೋವು ತರಿಸಿದೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...