ವಿಧಾನ ಪರಿಷತ್ ಉಪಚುನಾವಣೆ; ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

Date:

Advertisements

ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ 2024ರ ಫೆಬ್ರವರಿ 16 ರಂದು ಉಪಚುನಾವಣೆ ನಡೆಯಲಿದೆ. ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟವಾಗಿದೆ.

“ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಎನ್ ಶಿವಶಂಕರ ಪ್ರಕಟಣೆಯಲ್ಲಿ” ತಿಳಿಸಿದ್ದಾರೆ.

“ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.

Advertisements

“ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ” ಎಂದು ಹೇಳಿದ್ದಾರೆ.

“ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ” ಎಂದರು.

“ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಫೆ.12ರಿಂದ 23ರವರೆಗೆ ವಿಧಾನಸಭಾ ಅಧಿವೇಶನ: ಸಭಾಧ್ಯಕ್ಷ ಯು.ಟಿ ಖಾದರ್

ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಎನ್ ಶಿವಶಂಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X