ಮಂಗಳೂರು | ಪತಂಜಲಿ ಫುಡ್ಸ್ ನಿಂದ ಫಲ್ಗುಣಿಗೆ ಮಾರಕ; ಸ್ಥಳಕ್ಕೆ ಸಂಘಟನೆಗಳ ಮುಖಂಡರ ಭೇಟಿ

Date:

Advertisements

ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ಮಾಲೀಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ತುಳುನಾಡಿನ ಜೀವನದಿ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆಗಳು ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರೈತ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳು ಹಾಗೂ ಎಡಪಕ್ಷಗಳ ಜಂಟಿ ನಿಯೋಗ ಬುಧವಾರ ಭೇಟಿ ನೀಡಿ ಆಗಿರುವ ಹಾನಿ ವೀಕ್ಷಿಸಿತು.

ನಿಯೋಗವು ಮಾಲಿನ್ಯ ಪತ್ತೆಯಾದ ಪತಂಜಲಿ ಫುಡ್ಸ್ ಮುಂಭಾಗ ತಲುಪಿದಾಗ ಕಂಪೆನಿಯ ಕಾರ್ಮಿಕರು ಜೆಸಿಬಿ ಹಾಗೂ ಟಿಪ್ಪರ್ ಬಳಸಿ ತೋಕೂರು ನಾಲದಲ್ಲಿ ಹರಿಯದೆ ಶೇಖರಣೆ ಗೊಂಡಿರುವ, ದಶಕಗಳಿಂದ ಮಣ್ಣಿನ ಆಳಕ್ಕೆ ಇಳಿದು ಜಿಡ್ಡು ಗಟ್ಟಿರುವ ತ್ಯಾಜ್ಯವನ್ನು ತೆರವುಗೊಳಿಸುವ ಕೆಲಸದಲ್ಲಿ ತೊಡಗಿದ್ದರು. ಸತತ ಆರು ದಿನಗಳಿಂದ ತೆರವು ಕಾರ್ಯಾಚರಣೆ ನಡೆಯುತ್ತಿದ್ದರೂ ಮಾಲಿನ್ಯ ಕಣ್ಣಿಗೆ ರಾಚುವಂತೆ ಎದ್ದು ಕಾಣುತ್ತಿತ್ತು.

ದೊಡ್ಡ ನಿಯೋಗವನ್ನು ಕಂಡು ವಿಚಲಿತರಾದ ಕಂಪೆನಿಯ ಅಧಿಕಾರಿಗಳು ಮುಖಂಡರೊಂದಿಗೆ ಮಾತಾಡಿ ತಿಪ್ಪೆ ಸಾರಿಸಲು ಯತ್ನಿಸಿದರು. ತಿಂಗಳ ಹಿಂದೆ ಅಡುಗೆ ತೈಲದ ಮೂಲ ದ್ರವ್ಯಹೊಂದಿದ್ದ ಟ್ಯಾಂಕರ್ ಒಂದು ಕಂಪೆನಿಯ ಒಳಗಡೆ ಮಗುಚಿ ಬಿದ್ದು 30 ಟನ್ ದ್ರವ್ಯ ತೋಕೂರು ಹಳ್ಳಕ್ಕೆ ಹರಿದಿದೆ ಎಂಬುದು ಕಂಪೆನಿಯ ಸಮಜಾಯಿಷಿಯಾಗಿತ್ತು.

Advertisements
ಪತಂಜಲಿ - ಮಂಗಳೂರು

ಒಂದು ಟ್ಯಾಂಕರ್ ಮಗುಚಿ ಬಿದ್ದರೆ, ಆರು ದಿನಗಳ ಕಾಲ ಟಿಪ್ಪರ್, ಟ್ಯಾಂಕರ್, ಜೆಸಿಬಿ ಬಳಸಿ ಹಗಲು ರಾತ್ರಿ ತೆರವುಗೊಳಿಸುತ್ತಿದ್ದರೂ ಕಾರ್ಯಾಚರಣೆ ಯಾಕೆ ಪೂರ್ಣ ಗೊಳ್ಳುತ್ತಿಲ್ಲ, ತಿಂಗಳ ಹಿಂದೆ ಟ್ಯಾಂಕರ್ ಮಗುಚಿ ತೋಕೂರು ಹಳ್ಳಕ್ಕೆ ಹರಿದಿದ್ದರೂ ನಾಲ್ಕು ವಾರ ತೈಲ ತೆರವಿಗೆ ಕಾರ್ಯಾಚರಣೆ ನಡೆಸದಿರುವುದು ಯಾಕೆ? ಸಮಿತಿ ದೂರು ಸಲ್ಲಿಸಿ, ಪರಿಸರ ಅಧಿಕಾರಿಗಳು ಮಹಜರು ನಡೆಸಿದ ನಂತರ ತೆರವುಗೊಳಿಸಲು ಕಾರಣ ಏನು? ಕೈಗಾರಿಕಾ ತ್ಯಾಜ್ಯ ಹರಿಸುವ ಕುರಿತು ವರ್ಷಗಳಿಂದ ಪ್ರತಿಭಟಿಸುತ್ತಿದ್ದೇವೆ, ಮಾಲಿನ್ಯ ಪತ್ತೆಯಾದ ಸ್ಥಳದಲ್ಲಿಯೂ ತ್ಯಾಜ್ಯ ನೆಲದ ಆಳಕ್ಕೆ ಇಳಿದಿದೆ, ವೈಟ್ ಸಿಮೆಂಟ್ ರೀತಿ ಗಟ್ಟಿಯಾಗಿ ಪರಿವರ್ತನೆ ಹೊಂದಿದೆ, ಟ್ಯಾಂಕರ್ ಮಗುಚಿರುವುದಾದರೆ ಇದು ಹೇಗೆ ಸಾಧ್ಯ? ಎಂಬ ಪ್ರಶ್ನೆಗಳಿಗೆ ಕಂಪೆನಿಯ ಅಧಿಕಾರಿಗಳಲ್ಲಿ ಉತ್ತರವಿರಲಿಲ್ಲ.

ಮೇಲಧಿಕಾರಿಗಳ ಆದೇಶಕ್ಕೆ ಕಾಯುತ್ತಿದ್ದೇವೆ

ಬಳಿಕ ನಿಯೋಗ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ರವಿ ಅವರನ್ನು ಭೇಟಿ ಮಾಡಿತು. ಅಧಿಕಾರಿ ರವಿ, “ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಗಾಗಿ ಪತಂಜಲಿ ಫುಡ್ಸ್ ಮುಚ್ಚಲು ಅನುಮತಿ ನೀಡುವಂತೆ ಈಗಾಗಲೆ ಮಾಲಿನ್ಯ ನಿಯಂತ್ರಣ ಮಂಡಳಿಯ ರಾಜ್ಯ ಅಧಿಕಾರಿಗೆ ಪತ್ರ ಬರೆಯಲಾಗಿದೆ. ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ಕೇಳಲಾಗಿದೆ. ಮೇಲಧಿಕಾರಿಗಳ ಆದೇಶಕ್ಕಾಗಿ ಕಾಯುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಪತಂಜಲಿ 01

ತೋಕೂರು ಹಳ್ಳದಲ್ಲಿ ಶೇಖರಣೆ ಗೊಂಡಿರುವ ತ್ಯಾಜ್ಯವನ್ನು ತೆರುವುಗೊಳಿಸಲು ಕಂಪೆನಿಗೆ ಅವಕಾಶ ನೀಡಿರುವುದು ಯಾಕೆ? ಸಂಗ್ರಹಿಸಿ ಕಂಪೆನಿಯ ಒಳಭಾಗಕ್ಕೆ ಕೊಂಡೊಯ್ದಿರುವ ತ್ಯಾಜ್ಯವನ್ನು ಕಂಪೆನಿ ಏನು ಮಾಡುತ್ತದೆ? ಇದರಿಂದ ಸಾಕ್ಷಿ ನಾಶ ಆಗುವುದಿಲ್ಲವೇ? ಎಂಬ ಪ್ರಶ್ನೆಗಳಿಗೆ ಅಧಿಕಾರಿಯಿಂದ ಸಮರ್ಪಕ ಉತ್ತರ ಸಿಗಲಿಲ್ಲ. ಕಂಪೆನಿಯ ಒಳಭಾಗ ತೆರಳಿ ಎಲ್ಲವನ್ನೂ ದಾಖಲಿಸಿಕೊಳ್ಳುವುದಾಗಿ ಸಮಾಧಾನಿಸಲು ಯತ್ನಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ಪಸ್ಥ; ಆಸ್ಪತ್ರೆಗೆ ದಾಖಲು

ಈ ನಿಯೋಗದಲ್ಲಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ರಾಜ್ಯ ರೈತ ಸಂಘದ ಸನ್ನಿ ಡಿ ಸೋಜ, ಆದಿತ್ಯ ಕಲ್ಲಾಜೆ, ಪ್ರಾಂತ ರೈತ ಸಂಘದ ನಾಯಕ ಕೃಷ್ಣಪ್ಪ ಸಾಲ್ಯಾನ್, ದಲಿತ ಸಂಘರ್ಷ ಸಮಿತಿಯ ಎಂ ದೇವದಾಸ್, ರಘು ಎಕ್ಕಾರು, ಕಾರ್ಮಿಕ ಸಂಘಟನೆ ಸಿಐಟಿಯು ನ ಸುನಿಲ್ ಕುಮಾರ್ ಬಜಾಲ್, ಎಐಟಿಯುಸಿ ಕರುಣಾಕರ ಮಾರಿಪಳ್ಳ, ತಿಮ್ಮಪ್ಪ ಕಾವೂರು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ ಬಂಟ್ವಾಳ್, ಡಿವೈಎಫ್ಐ ಜಿಲ್ಲಾ ನಾಯಕರುಗಳಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಶ್ರೀನಾಥ್ ಕುಲಾಲ್, ಆಶಾ ಬೋಳೂರು, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಜೋಕಟ್ಟೆ ಗ್ರಾ.ಪಂ ಸದಸ್ಯರಾದ ಅಬೂಬಕ್ಕರ್ ಬಾವಾ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X