ಉಡುಪಿ | ಬಾಬು ಜಗಜೀವನ ರಾಮ್ ರವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾದುದು – ಸಂಸದ ಶ್ರೀನಿವಾಸ ಪೂಜಾರಿ

Date:

Advertisements

ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿಪದ್ಧತಿ ವಿರುದ್ಧ ಹೋರಾಡಿ, ದೀನದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅವಿರತವಾಗಿ ಶ್ರಮಿಸಿದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಬಾಬು ಜಗಜೀವನ ರಾಮ್ ರವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪ.ಜಾತಿ, ಪ.ಪಂಗಡಗಳ ಸಂಘಟನೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ರವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ಹಸಿರುಕ್ರಾಂತಿಯ ಹರಿಕಾರ, ಭಾರತದ ಉಪಪ್ರಧಾನಿಯಾದ ಡಾ. ಬಾಬು ಜಗಜೀವನ ರಾಮ್ ಜನ್ಮ ದಿಚಾರಣೆಯು ಒಂದು ವಿಶಿಷ್ಠವಾದ ಕಾರ್ಯಕ್ರಮವಾಗಿದ್ದು, ಸುಮಾರು ಒಂದು ಶತಮಾನದ ಹಿಂದೆ ಸಾಮಾಜಿಕ ನ್ಯಾಯದ ಕಲ್ಪನೆಯೇ ಇಲ್ಲದೇ, ಸಮಾಜದಲ್ಲಿ ಸಮಾನತೆ ಕನಸಾಗಿದ್ದ ಸಂದರ್ಭದಲ್ಲಿ ಅಸ್ಪೃಷ್ಯತೆ, ಜಾತಿಪದ್ಧತಿ ತಾಂಡವವಾಡುತ್ತಿದ್ದಾಗ ಇವುಗಳ ವಿರುದ್ಧ ಹೋರಾಡಿ, ಸಮಾಜದಲ್ಲಿ ಸಮಾನತೆಯನ್ನು ತಂದಿದ್ದಾರೆ. ಎಲ್ಲಾ ಅವಮಾನಗಳನ್ನು ಎದುರಿಸಿ, ಆತಂಕಗಳನ್ನು ನಿವಾರಿಸಿಕೊಂಡು ಅತ್ಯಂತ ಪ್ರಮುಖ ಸ್ಥಾನವನ್ನು ಅಲಂಕರಿಸುವುದರೊಂದಿಗೆ ಸಮಾಜದಲ್ಲಿ ಸಮಾನತೆಯ ಸಂಕೇತವಾದ ಸ್ಥಾನದಲ್ಲಿರುವವರಲ್ಲಿ ಜಗಜೀವನ್ ರಾಂ ಕೂಡ ಒಬ್ಬರಾಗಿದ್ದರು ಎಂದರು.

Advertisements
1004932122

ಬದುಕಿನ ಬಹು ಭಾಗವನ್ನು ಅಧಿಕಾರದಲ್ಲಿ ಕಳೆದರೂ ಸಹ ಸಮಾಜದ ಉನ್ನತಿಗಾಗಿ ತನ್ನ ಜೀವನವನ್ನು ಸಮರ್ಪಣೆ ಮಾಡಿದ್ದಾರೆ. ದೇಶದಲ್ಲಿ ಬರಗಾಲ ಬಂದ ಸಂದರ್ಭದಲ್ಲಿ ಕೃಷಿ ಮಂತ್ರಿ ಆಗಿದ್ದ ಅವರು ಯಾರೂ ಊಹಿಸದಂತಹ ರೀತಿಯಲ್ಲಿ ಆಹಾರದ ಉತ್ಪಾದನೆ ಹಾಗೂ ಆಹಾರದ ವಿತರಣೆ ಮಾಡಿದ್ದಾರೆ. ಕಾರ್ಮಿಕ ಮಂತ್ರಿಯಾಗಿದ್ದಾಗ ಸಮಾಜದ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಜನರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡಿದ್ದಾರೆ ಎಂದರು.
ಡಾ. ಬಾಬು ಜಗಜೀವನ ರಾಮ್ ರವರ ಆದರ್ಶಗಳನ್ನು ಪಾಲಿಸಿಕೊಂಡ ಬಂದ ಅನೇಕರು ಇಂದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರ ಕಾರ್ಯಶೈಲಿ, ಶ್ರದ್ಧೆ, ತೀಕ್ಷ್ಣ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದು, ಬದಲಾದ ಕಾಲಘಟ್ಟದಲ್ಲಿ ಇಂದಿಗೂ ಸಹ ಸಮಾಜ ಅವರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನ ಹಾಗೂ ಹೆಮ್ಮೆಯಿಂದ ಗುರುತಿಸಿ, ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಸಮಕಾಲೀನರಾದ ಡಾ. ಬಾಬು ಜಗಜೀವನ ರಾಮ್ ರವರು ಕೇಂದ್ರದ ಕಾರ್ಮಿಕ ಹಾಗೂ ರಕ್ಷಣಾ ಸಚಿವರಾಗಿದ್ದಾಗ ದೂರದೃಷ್ಠಿಯಿಂದ ತೆಗೆದುಕೊಂಡ ನಿಲುವುಗಳು ಹಾಗೂ ರೂಪಿಸಿದ ಕಾನೂನುಗಳು ಆಡಳಿತ ವ್ಯವಸ್ಥೆಗೆ ಮಾದರಿಯಾಗುವಂತದ್ದು. ಬಾಬು ಜಗಜೀವನ ರಾಮ್ ರವರ ಕುರಿತು ಲೇಖನಗಳು, ಪುಸ್ತಕಗಳು, ಅವರ ಆದರ್ಶ, ಚಿಂತನೆಗಳು, ಜೀವನ ಶೈಲಿಯನ್ನು ಪ್ರತಿಯೊಬ್ಬ ಯುವ ಪೀಳಿಗೆಯು ಅವಲೋಕನ ಮಾಡುವುದರೊಂದಿಗೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಜ್ಜರಕಾಡು ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ. ನಿಕೇತನ ವ್ಯಕ್ತಿಯೇ ಶಕ್ತಿಯಾದ ಡಾ. ಬಾಬು ಜಗಜೀವನ ರಾಮ್ ರವರ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಸುಮಾರು ಮೂವತ್ತು ವರ್ಷಗಳ ಕಾಲ ವಿವಿಧ ಸಚಿವರಾಗಿ, ಉಪಪ್ರಧಾನಿಯಾಗಿ ಆಡಳಿತ ನಿರ್ವಹಿಸಿದ ಅವರು, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಸಮಾಜವಾದಿ ಸಿದ್ಧಾಂತದ ನಿಲುವಿನೊಂದಿಗೆ ಜೀವನವನ್ನು ಮುನ್ನಡೆಸಿಕೊಂಡು ಬಂದ ಧೀಮಂತ ಪ್ರತಿಭೆ. ಭಾರತ ಪ್ರಕಾಶಮಾನವಾಗಿರಲು ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಹೊಂದಿ ಅರ್ಹರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಆಶಯ ಹೊಂದಿದ್ದರು ಎಂದರು.

ಶತಮಾನದ ಹಿಂದೆ ಜಾತ್ಯಾತೀತ ನಿಲುವನ್ನು ಪ್ರತಿಪಾದನೆ ಮಾಡುವ ಸಂದರ್ಭದಲ್ಲಿ ವ್ಯಕ್ತಿಯಾಗಿ ಶಕ್ತಿಯಾಗಿ ಪ್ರಭಾವ ಬೀರಿದ್ದವರು ಅವರ ಪೋಷಕರು. ಬಾಲ್ಯದಲ್ಲಿಯೇ ತುಂಟಾಟದ ಹುಡುಗನಾಗಿದ್ದ ಜಗಜೀವನ ರಾಮ್ ರವರು ಪ್ರತಿಯೊಬ್ಬರ ಮಾತುಗಳನ್ನು ತಾಳ್ಮೆಯಿಂದ ಆಲಿಸುವ ಮನೋವ್ಯಕ್ತಿತ್ವ ಹೊಂದಿದ್ದರು. ಅವರ ಮಾನವೀಯ ನೆಲೆಯ ಆಲೋಚನೆಗಳು ರಾಜಕೀಯ ಹಾಗೂ ಸಾಮಾಜಿಕ ಜೀವನದಲ್ಲಿ ಎಲ್ಲರಿಗೂ ಪ್ರೇರಣೇಯಾಗಿದ್ದವು ಎಂದ ಅವರು, ನಮ್ಮ ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಸಹ ಇಂದಿಗೂ ಡಾ. ಬಾಬು ಜಗಜೀವನ ರಾಮ್ ಅವರನ್ನು ಧೀಮಂತ ನಾಯಕರಾಗಿ ಸ್ಮರಿಸಿಕೊಳ್ಳುತ್ತಿರವುದೇ ಅವರ ಆದರ್ಶಕ್ಕೆ ನಾವುಗಳು ನೀಡುವ ದೊಡ್ಡ ಉಡುಗೊರೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ಡಾ.ಉದಯ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಂಘಟನೆಗಳ ಮುಖಂಡರುಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ ಎಂ, ಸ್ವಾಗತಿಸಿ, ವಂದಿಸಿದರು, ವಾರ್ಡನ್ ಶ್ರೀದೇವಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X