ಚಾಮರಾಜನಗರ | ದೇಶದ ಆಹಾರ ಕ್ಷೇತ್ರ ಸ್ವಾವಲಂಬನೆಗೆ ಬಾಬೂಜೀಯವರ ಕೊಡುಗೆ ಅಪಾರ : ಎಚ್ ವಿ ಚಂದ್ರು

Date:

Advertisements

ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 38ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್ ವಿ ಚಂದ್ರು
‘ ಕೃಷಿಯಲ್ಲಿ ಹೊಸ ಹೊಸ ತಳಿಗಳನ್ನು ಸಂಶೋಧಿಸಿ ಆಹಾರ ಕ್ಷೇತ್ರದಲ್ಲಿ ಭಾರತ ಸ್ವಾವಲಂಬನೆ ಸಾಧಿಸಲು ಬಾಬೂಜೀ ಅವರ ಕೊಡುಗೆ ಅಪಾರವಾಗಿದೆ ‘ ಎಂದು ತಿಳಿಸಿದರು.

” ಶೋಷಿತ ಸಮುದಾಯದಲ್ಲಿ ಜನಿಸಿ ಸಾಕಷ್ಟು ನೋವು, ಅಪಮಾನಗಳನ್ನು ಎದುರಿಸಿ ಶಿಕ್ಷಣವೇ ಶಕ್ತಿ ಎಂದು ನಂಬಿದ್ದ ಡಾ. ಬಾಬು ಜಗಜೀವನ್ ರಾಮ್ ಅವರು ತಳ ಸಮುದಾಯದವರಾದರು ಸಹ ಉಪ ಪ್ರಧಾನಿಯಂತಹ ದೇಶದ ಅತ್ಯುನ್ನತ ಹುದ್ದೆಗೇರಬಹುದು ಎಂಬುದನ್ನು ಸಾಧಿಸಿ ತೋರಿಸಿಕೊಟ್ಟರು. ಸಚಿವ ಸಂಪುಟದಲ್ಲಿ ಆಹಾರ, ಕಾರ್ಮಿಕ, ರಕ್ಷಣಾ ಖಾತೆಗಳನ್ನು ಬಾಬೂಜೀಯವರು ಸಮರ್ಥವಾಗಿ ನಿಭಾಯಿಸಿ ಇತರರಿಗೂ ಮಾದರಿಯಾಗಿದ್ದಾರೆ. ಅವರ ಅದರ್ಶ ಚಿಂತನೆಗಳನ್ನು ಇಂದಿನ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಿದೆ ” ಎಂದರು.

ಭಾರತದಲ್ಲಿ ಆಹಾರಕ್ಕೆ ಆಹಾಕಾರ ಉಂಟಾಗಿದ್ದ ಸಂದರ್ಭದಲ್ಲಿ ಆಹಾರ ಖಾತೆಯನ್ನು ವಹಿಸಿಕೊಂಡ ಬಾಬುಜೀಯವರು ವೈಜ್ಞಾನಿಕ ಕೃಷಿಗೆ ಒತ್ತು ನೀಡುವ ಮೂಲಕ ಹೊಸ ಹೊಸ ತಳಿಗಳ ಅವಿಷ್ಕಾರಕ್ಕೆ ನಾಂದಿ ಹಾಡಿದರು. ಕಾರ್ಮಿಕ ಮಂತ್ರಿಯಾಗಿ ಕಾರ್ಮಿಕರ ದೌರ್ಜನ್ಯ, ದಬ್ಬಾಳಿಕೆಗಳನ್ನು ತಡೆದು ಕಾರ್ಮಿಕರ ಕಲ್ಯಾಣಕ್ಕೆ ಶ್ರಮಿಸಿದರು. ರಕ್ಷಣಾ ಮಂತ್ರಿಯಾಗಿದ್ದ ಸಮಯದಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾರತ ಸೈನ್ಯವನ್ನು ಯಶಸ್ವಿಯಾಗಿ ಮುನ್ನೆಡೆಸಿದ ಕೀರ್ತಿ ಬಾಬೂಜೀಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

Advertisements

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತ ಮಾತನಾಡಿ ‘ ದೇಶ ಕಂಡ ಧೀಮಂತ ನಾಯಕ ಬಾಬು ಜಗಜೀವನ್ ರಾಮ್. ದೇಶದ ಅಭಿವೃದ್ಧಿಗೆ ಬಾಬೂಜೀಯವರ ಕೊಡುಗೆ ಅಪಾರವಾಗಿದೆ. ಜನ ಸಾಮಾನ್ಯರಿಗೆ ಸ್ವಾಭಿಮಾನದ ಅಸ್ಮಿತೆಯನ್ನು ಗುರುತಿಸಿಕೊಳ್ಳಲು ವೇದಿಕೆ ಒದಗಿಸಿಕೊಟ್ಟ ಬಾಬೂಜೀಯವರ ಪುಣ್ಯಸ್ಮರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ ‘ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಮಾತನಾಡಿ ” ಬಿಹಾರದ ಕುಗ್ರಾಮದಲ್ಲಿ ಹುಟ್ಟಿ ಭಾರತದ ರಾಜಕೀಯ ಇತಿಹಾಸಲ್ಲಿ ಅಪೂರ್ವ ಸಾಧನೆಗೈದವರು ಬಾಬು ಜಗಜೀವನ್ ರಾಮ್. ಅಸ್ಪೃಶ್ಯತೆ ಆಚರಣೆ ವ್ಯಾಪಕವಾಗಿದ್ದ ಆಗಿನ ಕಾಲದಲ್ಲಿ ಶಾಲಾ ದಿನಗಳಿಂದಲೂ ಹುಟ್ಟು ಹೋರಾಟಗಾರರಾಗಿದ್ದ, ಎದೆಗುಂದದೇ ಜನರನ್ನು ಜಾಗೃತಗೊಳಿಸಿದರು. ಹಸಿರು ಕ್ರಾಂತಿ ಹುಟ್ಟು ಹಾಕಿ ದೇಶದ ಆಹಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದರು. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬೂ ಜಗಜೀವನ್ ರಾಮ್ ಈ ನಾಡು ಕಂಡ ಮಹಾನ್ ನಾಯಕರು. ಅವರ ವಿಚಾರಧಾರೆಗಳು ಅದರ್ಶ ಮೌಲ್ಯಯುತ ಗುಣಗಳನ್ನು ನಾವೆಲ್ಲರೂ ಅನುಸರಿಸಬೇಕಾಗಿದೆ ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಗೀತಕ್ಕೆ ಮನೋ ಚಿಕಿತ್ಸೆ ಗುಣವಿದೆ : ಡಾ ಡಿ ತಿಮ್ಮಯ್ಯ

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಸಮಾಜ ಕಲ್ಯಾಣ ಉಪನಿರ್ದೇಶಕಿ ಬಿಂದ್ಯಾ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ನಂಜುಂಡೇಗೌಡ, ಜನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ, ಸಮಾಜದ ಮುಖಂಡರಾದ ಬಸವನಪುರ ರಾಜಶೇಖರ್, ಚಾ.ಗು. ನಾಗರಾಜು, ಎಂ. ಶಿವಕುಮಾರ್, ಡ್ಯಾನ್ಸ್ ಬಸವರಾಜು, ಸೆಂಟ್ರಿಂಗ್ ಸಿದ್ದಪ್ಪ, ಸೋಮೇಶ್, ಮನು, ರಾಚಪ್ಪ, ಮಹೇಶ್, ಆಲೂರು ನಾಗೇಂದ್ರ ಸೇರಿದಂತೆ ಇನ್ನಿತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X