ಕೋಲಾರ | ನಾಯಿ ಕಚ್ಚಿ ಬಿಟ್ಟ ಶಿಶು ಶವ ಪತ್ತೆ; ಹೆಣ್ಣು ಬೇಡವೆಂದು ಕೊಂದರಾ ಪೋಷಕರು?

Date:

Advertisements

ನಾಯಿ ಕಚ್ಚಿದ ಗುರುತುಗಳಿರುವ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಅಬ್ಬತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಮಗುವಿನ ಮೃತದೇಹ ಪತ್ತೆಯಾಗಿದೆ.

ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಗುರುವಾರ ಬೆಳಗ್ಗೆ ಮಗುವನ್ನು ರಸ್ತೆಯ ಪಕ್ಕದ ಪೊದೆಗೆ ಎಸೆದಿರಬಹುದು. ಬೀದಿ ನಾಯಿಗಳು ಅದನ್ನು ರಸ್ತೆಗೆ ಎಳೆದುಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Advertisements

ಹೆಣ್ಣು ಮಗು ಬೇಡ ಎಂಬ ಕಾರಣಕ್ಕೆ ನವಜಾತ ಶಿಶುವನ್ನು ಕುಟುಂಬಸ್ಥರೇ ಕೊಂದು ಹಾಕಿರುವ ಅನುಮಾನಗಳು ವ್ಯಕ್ತವಾಗಿವೆ.

ಮಗುವಿನ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ವೇಮಗಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಚ್ಚತನಹಳ್ಳಿ ಮುಖ್ಯರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆಗಾಗಿ ಪಡೆದುಕೊಂಡಿದ್ದಾರೆ. ಬುಧವಾರ ಜನಿಸಿದ ಶಿಶುಗಳ ಕುರಿತು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಗಳು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ಕೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X