ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ

Date:

Advertisements

‘ಮೂರು ದಿನಗಳ ಕಾಲ ನಡೆಯುವ ರನ್ನ ವೈಭವಕ್ಕೆ ಯಾವುದೇ ಕುಂದುಬರದಂತೆ ಎಲ್ಲ ಸಿದ್ದತೆ ಭರದಿಂದ ಸಾಗಿದೆ. ಅಧಿಕಾರಿಗಳು ಪರಿಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರನ್ನ ವೈಭವ ವಿಜೃಂಭಣೆಯಿಂದ ನಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ’ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪ್ರವಾಸಿ ಮಂದಿರದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಗುರುವಾರ ರಾಜ್ಯ ಸರ್ಕಾರ ₹2 ಕೋಟಿ ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ₹50 ಲಕ್ಷ, ಪ್ರವಾಸೋದ್ಯಮ ಇಲಾಖೆ ₹20 ಲಕ್ಷ ನೀಡಿದೆ. ಹಲವಾರು ಸಂಘ, ಸಂಸ್ಥೆಗಳು, ದಾನಿಗಳು ಹಣ ನೀಡಲು ಮುಂದೆ ಬಂದಿದ್ದಾರೆ’ ಎಂದು ತಿಳಿಸಿದರು.

‘ಶನಿವಾರ ರನ್ನ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಯಿಂದ ನಡೆಯುವ ಪುರುಷರ ಹಾಗೂ ಮಹಿಳೆಯ ಕಬಡ್ಡಿ ಟೂರ್ನಿಯಲ್ಲಿ ದೇಶದ ವಿವಿಧೆಡೆಯ ಪ್ರೊ ಕಬಡ್ಡಿ ಆಟಗಾರರು ಆಗಮಿಸಲಿದ್ದಾರೆ. 20 ಪುರುಷರ ಹಾಗೂ 15 ಮಹಿಳಾ ತಂಡಗಳು ಭಾಗವಹಿಸಲಿವೆ. ರಾಜ್ಯದ ಶ್ರೇಷ್ಠ ಗಾಯಕರು, ನಿರೂಪಕರು, ಸಾಹಿತಿಗಳು, ಕ್ರೀಡಾಪಟುಗಳು ಆಗಮಿಸಿ ಜನರನ್ನು ರಂಜಿಸಲಿದ್ದಾರೆ’ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಮುಖ್ಯ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ: ಯಾರು ಈ ಜ್ಞಾನೇಶ್ ಕುಮಾರ್?

ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X