ಬಾಗಲಕೋಟೆ | ರೈತ ಮುಖಂಡನ ಮೇಲೆ ಹಲ್ಲೆ ಪ್ರಕರಣ; ನಿರಾಣಿ ಸಹೋದರರ ವಿರುದ್ಧ ಪ್ರಕರಣ ದಾಖಲು

Date:

Advertisements

ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ನಿರಾಣಿ ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾಗಿದ್ದ ರೈತ ಮುಖಂಡ ಯಲ್ಲಪ್ಪ ಹೆಗಡೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ ಮುಧೋಳ ಪೊಲೀಸರು ಮುರುಗೇಶ್‌ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ ನಿರಾಣಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ, ಯಲ್ಲಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದಾರೆ ಎಂದು ಮುರುಗೇಶ್ ನಿರಾಣಿ ಆರೋಪಿಸಿದ್ದರು. ಅಲ್ಲದೆ, ಯಲ್ಲಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಮಾನನಷ್ಟಕ್ಕೆ ಪರಿಹಾನವಾಗಿ ಐದು ಕೋಟಿ ರೂ. ನೀಡಬೇಕೆಂದು ಲೀಗಲ್ ನೋಟೀಸ್ ಕಳಿಸಿದ್ದರು.

Advertisements

ನಿರಾಣಿ ಅವರಿಗೆ ಭಿಕ್ಷಾಟನೆ ಅಭಿಯಾನ ಮಾಡಿ ಪರಿಹಾರ ಮೊತ್ತ ನೀಡುತ್ತೇನೆ ಎಂದಿದ್ದ ಯಲ್ಲಪ್ಪ, ಬಾಗಲಕೋಟೆ ಜಿಲ್ಲೆಯಲ್ಲಿ ಭಿಕ್ಷಾಟನೆ ನಡೆಸುತ್ತಿದ್ದರು. ಸೋಮವಾರ ಬೀಳಗಿಯಲ್ಲಿ ಭಿಕ್ಷಾಟನೆ ಅಭಿಯಾನ ನಡೆಸಲು ನಿರ್ಧರಿಸಿದ್ದರು. ಹೀಗಾಗಿ, ಅವರು ಬೀಳಗಿಗೆ ತೆರಳುವಾಗ ಇಂಗಳಗಿ ಕ್ರಾಸ್ ಬಳಿ ಅವರ ಮೇಲೆ ಐವರ ಗುಂಪು ಸೋಮವಾರ ಹಲ್ಲೆ ಮಾಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X