ಬಾಗಲಕೋಟೆ | ಬಾಲಕರ ವಸತಿ ನಿಲಯದಲ್ಲಿ ಅವ್ಯವಸ್ಥೆ; ಸಿಬ್ಬಂದಿಗೆ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಬ್ಬಿ ತರಾಟೆ

Date:

Advertisements

ಹುನಗುಂದ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರಿಕ್‌ ಪೂರ್ವ ವಸತಿ ನಿಲಯ ಮತ್ತು ಮೆಟ್ರಿಕ್‌ ನಂತರದ ವಸತಿ ನಿಲಯಕ್ಕೆ ಬಾಗಲಕೋಟೆ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

“ಪಟ್ಟಣದ ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದಲೂ ಹಾಗೇ ಇದ್ದು, ಮಲಿನಗೊಂಡ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುವ ತಾಣವಾಗಿದೆ. ಇಷ್ಟು ದಿನವಾದರೂ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ ಎಚ್ ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಘಟನೆ ನಡೆಯಿತು.

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, “ಊಟ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌” ಎಂದು ಸೂಚಿಸಿದರು.‌

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ತಡೆಯದಿದ್ದಲ್ಲಿ ಹೋರಾಟದ ಎಚ್ಚರಿಕೆ

“ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದ ನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯ, ಅಡುಗೆಕೋಣೆ, ಸ್ವಚ್ಛತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳ ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್‌ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ ಎಚ್ ಬಿದರಿ, ತಹಶೀಲ್ದಾರ್ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಂ ಎಚ್ ಕಳ್ಳಿಗುಡ್ಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X