ಬಾಗಲಕೋಟೆ | ಒಳಮೀಸಲಾತಿ ಆದೇಶಕ್ಕೆ ಸಿಎಂ ಸಿದ್ದರಾಮಯ್ಯ ಹಿಂದೇಟು; ಮಾದಿಗ ಸಮುದಾಯ ಆರೋಪ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದರಿಂದ ಒಳಮೀಸಲಾತಿ ಆದೇಶ ಹೊರಡಿಸಲು ತಡ ಮಾಡುತ್ತಿದ್ದಾರೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಶಿವರಾಯ ಅಕ್ಕರಕಿ ಆರೋಪಿಸಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಾದಿಗ ಸಮುದಾಯದ ವತಿಯಿಂದ ಶನಿವಾರ ಪ್ರತಿಭಟನೆ‌ ನಡೆಸಿ, ಅಂಬೇಡ್ಕರ್ ವೃತ್ತದಿಂದ ಆರಂಭವಾದ ಮೆರವಣಿಗೆಯಲ್ಲಿ ಹಲಿಗೆ ಬಾರಿಸುತ್ತ ಸಾಗಿದ ಸಮುದಾಯದ ಜನರು ತಹಶೀಲ್ದಾರ್ ಕಾರ್ಯಾಲಯದವರೆಗೆ ತಹಶೀಲ್ದಾರ್ ಸುಹಾಸ್ ಇಂಗಳೆ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಶೋಷಿತ ಸಮಾಜಗಳಿಗೆ ಅಗತ್ಯವಾಗಿರುವ ಒಳಮೀಸಲಾತಿ ಕಲ್ಪಿಸುವ ಹೊಣೆಗಾರಿಕೆಯನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದೆ. ಆದರೆ, ರಾಜ್ಯ ಸರ್ಕಾರವು ಮೀನಾಮೇಷ ಎಣಿಸುತ್ತಿದೆ” ಎಂದು ದೂರಿದರು.

Advertisements

“ಸರ್ಕಾರ ವಿಳಂಬನೀತಿ ಅನುಸರಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು. ಒಳಮೀಸಲಾತಿ ವರ್ಗೀಕರಣದ ಕುರಿತು ಮಾದಿಗ ಸಮಾಜದ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಧ್ವನಿ ಎತ್ತಲೇಬೇಕು” ಎಂದು ಹೇಳಿದರು.

ಒಳಮೀಸಲಾತಿಗೆ ಆಗ್ರಹ 1

ಘಟಕದ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ ಮಾತನಾಡಿ, “ಬೇರೆ ರಾಜ್ಯಗಳಲ್ಲಿ ಮೀಸಲಾತಿ ಜಾರಿಗೆ ತಂದಿರುವ ಕಾಂಗ್ರೆಸ್ ಪಕ್ಷಕ್ಕೆ, ಕರ್ನಾಟಕದಲ್ಲಿ ಜಾರಿಗೆ ತರಲು ಯಾವ ತೊಂದರೆಯಾಗಿದೆ. ಸಚಿವರುಗಳಾದ ಆರ್ ಬಿ ತಿಮ್ಮಾಪುರ, ಕೆ ಎಚ್‌ ಮುನಿಯಪ್ಪ ರಾಜೀನಾಮೆ ನೀಡಿ ಒಳಮೀಸಲಾತಿ ಜಾರಿಗೆ ತರುವ ಹೋರಾಟದಲ್ಲಿ ಭಾಗವಹಿಸಿ, ಸಮಾಜ ನಿಮ್ಮೊಂದಿಗೆ ಇರುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭೀಮಸಿ ಕಲಾದಗಿಯವರ ನುಡಿ ನಮನ ಕಾರ್ಯಕ್ರಮ

ದಲಿತ ಸಂಘರ್ಷ ಬೆಳಗಾವಿ ಸಂಚಾಲಕ ಮಹೇಶ ಹುಗ್ಗಿ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಬೆಳಗಾವಿ ವಿಭಾಗದ ಮುಖ್ಯಸ್ಥ ಬಸವರಾಜ ಅರವಳಿ, ಎಂಆರ್‌ಎಚ್‌ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮು ಚೂರಿ, ಮಾದಿಗೆ ಮೀಸಲಾತಿ ಹೋರಾಟ ಸಮಿತಿಯ ತಾಲೂಕು ಮುಖಂಡ ಶಿವಾನಂದ ಬಿಸನಾಳ, ರಾಜು ಮನ್ನಿಕೇರಿ, ಕೃಷ್ಣಾ ವೈ ಮಾದರ, ಸಿದ್ದು ಮಾದರ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X