ಬಾಗಲಕೋಟೆ | ವಿಶ್ವಜ್ಞಾನಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಸ್ಪರ್ಧಾತ್ಮಕ ಪರೀಕ್ಷೆ: ಡಿವಿಪಿ

Date:

Advertisements

ಶೋಷಿತರು, ಬಡವರು, ದಲಿತರು, ಕೂಲಿಕಾರ್ಮಿಕರು ವಿದ್ಯಾರ್ಥಿ ಯುವಜನರು ಸಾಮಾಜಿಕವಾಗಿ ಮುನ್ನೆಲೆಗೆ ಬರಬೇಕು ಮತ್ತು ಶೋಷಿತರು ಸಾಮಾಜಿಕವಾಗಿ, ವೈಚಾರಿಕವಾಗಿ ಮಾತ್ರವಲ್ಲದೆ ಶೈಕ್ಷಣಿಕವಾಗಿಯೂ ಪ್ರಗತಿ ಸಾಧಿಸಿ ಈ ದೇಶದಲ್ಲಿರುವ ಅಸಮಾನತೆ, ಅನಾಗರಿಕತೆ, ಮೌಢ್ಯತೆಯನ್ನು ಧಿಕ್ಕರಿಸಿ ಸಾಮರಸ್ಯದ ಬದುಕು ನಡೆಸಲು ಈ ಶಿಕ್ಷಣ ದಾರಿ ದೀಪವಾಗಬೇಕು ಎನ್ನುವ ನಿಟ್ಟಿನಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸುದೀರ್ಘ ಹೋರಾಟ ಇಂದು ನಮ್ಮೆಲ್ಲರನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಅಣಿ ಮಾಡಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಬಾಗಲಕೋಟೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್ ಕಲಾದಗಿ ತಿಳಿಸಿದರು.

ಡಾ. ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ನಿಮಿತ್ಯ ರಾಜ್ಯಾದ್ಯಂತ ಡಾ. ಬಿ ಆರ್ ಅಂಬೇಡ್ಕರ್ ಕುರಿತು ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

WhatsApp Image 2023 08 26 at 10.21.05 AM

“ವಿದ್ಯೆಯೇ ವಿಮೋಚನೆಗೆ ಹೆದ್ದಾರಿ, ಶಿಕ್ಷಣವೇ ಪ್ರತಿಯೊಂದು ಕ್ರಾಂತಿಗೆ ಮೂಲಾಧಾರ ಎನ್ನುವ ನಿಟ್ಟಿನಲ್ಲಿ ಇಂದಿನ ವಿದ್ಯಾರ್ಥಿ ಯುವಜನರು ಸಾಗಬೇಕಾಗಿರುವುದರ ಭಾಗವಾಗಿ ದಲಿತ ವಿದ್ಯಾರ್ಥಿ ಪರಿಷತ್ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತವಾಗಿ ರಾಜ್ಯಾದ್ಯಂತ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ‌ಆಗಸ್ಟ್ 27‌ರ ಭಾನುವಾರದಂದು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ ಕೈಗೊಂಡಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸಬೇಕು

“ಬಾಗಲಕೋಟೆಯಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನವನಗರ ಪರೀಕ್ಷಾ ಕೇಂದ್ರವಾಗಿ ನಿಗದಿಯಾಗಿದೆ. ಈ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಕ್ರಮವಾಗಿ 5 ಲಕ್ಷ ರೂಪಾಯಿ 2.5 ರೂಪಾಯಿ 1 ಲಕ್ಷ ರೂಪಾಯಿ ಬಹುಮಾನ ಮತ್ತು ಉಚಿತ ಐಎಎಸ್ ಕೆಎಎಸ್ ಕೋಚಿಂಗ್ ಕೊಡಿಸುವುದು ಹಾಗೂ ಜಿಲ್ಲಾ ಮಟ್ಟದ ಮೂರು ಬಹುಮಾನಗಳನ್ನೂ ಕೂಡ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಅವರನ್ನು ಶಿಕ್ಷಣಕ್ಕೆ ಪ್ರೇರೇಪಿಸಲು ಪರೀಕ್ಷೆ ಕೈಗೊಳ್ಳಲಾಗಿದೆ” ಎಂದರು.

“ಪರೀಕ್ಷೆಗೆ ಈಗಾಗಲೇ ನೊಂದಾಯಿಸಿಕೊಂಡ ಸ್ಪರ್ಧಾರ್ಥಿಗಳು ಸರಿಯಾಗಿ 11 ಗಂಟೆ ಒಳಗಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು” ಎಂದು ಸೂಚಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X