ಬಾಗಲಕೋಟೆ | ಕೇಂದ್ರ ಗೃಹಸಚಿವ ಅಮಿತ್‌ ಶಾ ವಜಾಕ್ಕೆ ದಸಂಸ ಆಗ್ರಹ

Date:

Advertisements

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನಧೈರ್ಯ ತೋರಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾನನ್ನು ಈ ಕೂಡಲೇ ಅಧಿಕಾರದಿಂದ ವಜಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಹೇಳಿದರು.

ದಲಿತ ಸಂಘರ್ಷ ಸಮಿತಿ ಬಾಗಲಕೋಟೆ ಜಿಲ್ಲಾ ಸಮಿತಿಯಿಂದ ತಹಶೀಲ್ದಾರ್ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ದೇಶದ ಶೋಷಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರು ಮತ್ತು ಎಲ್ಲ ವರ್ಗದ ಮಹಿಳೆಯರು ಸಾವಿರಾರು ವರ್ಷಗಳಿಂದ ಜಾತಿ ವ್ಯವಸ್ಥೆ ಮೂಲಕ ತಾರತಮ್ಯ ನೀತಿಗೆ ಸಿಲುಕಿ ಪ್ರತಿ ಕ್ಷೇತ್ರದಲ್ಲೂ ವಂಚಿತರಾಗಿದ್ದಾರೆ. ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಹೋರಾಟ ಮಾಡಿ ಸ್ವಾತಂತ್ರ್ಯಾ ನಂತರ ಭಾರತಕ್ಕೆ ಸಂವಿಧಾನ ನೀಡಿ ಶೋಷಿತ ಸಮುದಾಯಗಳ ಆಶಾಕಿರಣವಾಗಿದ್ದಾರೆ. ಅಂಥವರನ್ನು ಹಿಯಾಳಿಸುವ ಗೃಹಸಚಿವರಿಗೆ ನಾಚಿಕೆಯಾಗಬೇಕು” ಎಂದು ಕಿಡಿಕಾರಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಚಿವ ಸಂಪುಟದಿಂದ ಅಮಿತ್ ಶಾ ವಜಾಕ್ಕೆ ದಸಂಸ ಆಗ್ರಹ

“ಅಮಿತ್ ಶಾ ಅವರ ಹೇಳಿಕೆಯಿಂದ ಜಾತಿವಾದಿ ಮತ್ತು ತಾರತಮ್ಯ ನೀತಿಯ ಆರ್‌ಎಸ್‌ಎಸ್‌ ಸಿದ್ದಾಂತ ಅರ್ಥವಾಗುತ್ತದೆ. ದೇಶದ ಸಂವಿಧಾನವನ್ನು ವಿರೋಧಿಸುತ್ತ ಬಂದಿರುವ ಮನಸು, ಸಿದ್ಧಾಂತದ ಹಿನ್ನೆಲೆಯುಳ್ಳ ಸಂಘಟನೆಗಳ ಆರ್‌ಎಸ್‌ಎಸ್‌ ಬೆಂಬಲದಲ್ಲಿ ರಾಜಕಾರಣ ಮಾಡುತ್ತ ಬಂದಿರುವ ಕೋಮುವಾದಿ ಮತ್ತು ಜಾತಿವಾದಿ ಬಿಜೆಪಿ ನಿಲುವನ್ನು ಈ ಮೂಲಕ ಸ್ಪಷ್ಟಪಡಿಸಿದ್ದಾರೆ. ಇದು ನಮ್ಮ ದೇಶದಲ್ಲಿ ನಡೆಯುವುದಿಲ್ಲ. ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಸವರಾಜ ದೊಡ್ಡಮನಿ, ಸದಾಶಿವ ಐನಾಪುರ, ಅಪ್ಪಾಜಿ ಕಾಂಬಳೆ, ಆರ್‌ ಸಿ ಚಲವಾದಿ, ಅಡಿವೆಪ್ಪ ಮರಗುದ್ದಿ, ಶಾಮ್ ಮಾದರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X