ಬಾಗಲಕೋಟೆ | ಲೋಕಾಪುರ ಸವದತ್ತಿ ರೈಲುಮಾರ್ಗ ನಿರ್ಮಾಣಕ್ಕೆ ಆಗ್ರಹ

Date:

ಉತ್ತರ ಕರ್ನಾಟಕದಲ್ಲಿಯೇ ಶಕ್ತಿ ದೇವತೆ ಹಾಗೂ ಈ ಭಾಗದ ಭಕ್ತರು, ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಲೋಕಾಪುರ-ಸವದತ್ತಿ ಮಾರ್ಗದಲ್ಲಿ ಹೊಸ ರೈಲುಮಾರ್ಗ ನಿರ್ಮಾಣದ ಅಗತ್ಯವಿದೆ. ಇದಕ್ಕಾಗಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಉತ್ತರ ಕರ್ನಾಟಕದ ಜನರು ಈ ಹೋರಾಟಕ್ಕೆ ಶಕ್ತಿ ತುಂಬಬೇಕು ಎಂದು ಕರ್ನಾಟಕ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಖಾಜಿ ಮನವಿ ಮಾಡಿದರು.

- Advertisement -

ಬಾಗಲಕೋಟೆ ನಗರದ ಚರಂತಿಮಠ ಸಮುದಾಯ ಭವನದಲ್ಲಿ ಲೋಕಾಪುರ-ರಾಮದುರ್ಗ-ಸವದತ್ತಿ ಯಲ್ಲಮ್ಮ ಮಾರ್ಗದಲ್ಲಿ ಹೊಸ ರೈಲುಮಾರ್ಗ ನಿರ್ಮಾಣದ ಹೋರಾಟ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

“ಬಾಗಲಕೋಟೆ-ಕುಡಚಿ ರೈಲು ಮಾರ್ಗ ನಿರ್ಮಾಣಕ್ಕಾಗಿ ಹೋರಾಟದ ಆಂದೋಲನವೇ ನಡೆದಿತ್ತು. ಇದಕ್ಕೆ ಜಿಲ್ಲೆಯ ಪ್ರತಿಯೊಬ್ಬರೂ ಬೆಂಬಲ ನೀಡಿ, ಹೋರಾಟದಲ್ಲಿ ಭಾಗಿಯಾಗಿದ್ದರು. ಕರ್ನಾಟಕದ ಅಭಿವೃದ್ಧಿಯ ಜೀವನಾಡಿಯಾಗಲಿದೆ. ಅದೇ ಮಾದರಿಯಲ್ಲಿ ಲೋಕಾಪುರ-ಧಾರವಾಡ ಮಾರ್ಗ ನಿರ್ಮಾಣ ಹೋರಾಟ ನಡೆಯಲಿದೆ” ಎಂದು ಹೇಳಿದರು.

“ಬಾಗಲಕೋಟೆ ಮತ್ತು ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಭಾಗಕ್ಕೆ ಅನುಕೂಲ ಆಗಲಿರುವ ಈ ಮಾರ್ಗ ಅನುಷ್ಠಾನಗೊಂಡರೆ, ಉತ್ತರ ಕರ್ನಾಟಕ ಜಿಲ್ಲೆಯ ಜನ ಪಕ್ಷಾತೀತ, ಜಾತ್ಯತೀತವಾಗಿ ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ವಕೀಲ ಜೆ ಜೆ ಕುಲಕರ್ಣಿ ಮಾತನಾಡಿ, “ಧಾರವಾಡದ ಹೈಕೋರ್ಟ್ ಪೀಠಕ್ಕೆ ತೆರಳಲು ವಕೀಲರು, ಜನರಿಗೆ, ಪ್ರವಾಸಿಗರಿಗೆ, ಈ ಮಾರ್ಗ ಬಹಳಷ್ಟು ಅನುಕೂಲವಾಗಲಿದೆ. ಮುಧೋಳ ತಾಲೂಕು ಕೈಗಾರಿಕೆಯ ನಾಡಾಗಿದೆ. ಸರಕು ಸಾಗಾಣಿಕೆಗೆ ರೈಲು ಅನುಕೂಲವಾಗಲಿದೆ. ಹಾಗಾಗಿ ರೈಲುಮಾರ್ಗ ಶೀಘ್ರ ಕಾರ್ಯರೂಪಕ್ಕೆ ಬಂದರೆ ರೈತರಿಗೆ ಸಹಕಾರಿಯಾಗಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬಹುರಾಷ್ಟ್ರೀಯ ಕಂಪನಿಗಳಿಂದ ಆಹಾರ ಸಾರ್ವಭೌಮತೆ ಕಸಿಯುವ ಹುನ್ನಾರ : ಸಿ. ಯತಿರಾಜು

ವಕೀಲ ರಾಜು ಮನ್ನಿಕೇರಿ ಮಾತನಾಡಿ, “ರಾಮದುರ್ಗ ಭಾಗದಲ್ಲಿ ಶಬರಿ ಕೊಳ, ಶಿರಸಂಗಿ ಕಾಳಮ್ಮ ದೇವಿ, ಶಿವನ ಮೂರ್ತಿ ಸೇರಿದಂತೆ ಇನ್ನೂ ಹಲವಾರು ಐತಿಹಾಸಿಕ ತಾಣಗಳಿದ್ದು, ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೈಲು ಮಾರ್ಗದಿಂದ ಅನುಕೂಲವಾಗುತ್ತದೆ” ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಧರ್ಮಂತಿ, ರಾಮದುರ್ಗದ ಹೋರಾಟಗಾರ ಅಭಿಷೇಕ ತಳ್ಳಿಕೇರಿ, ಗೈಬು ಜೈನುಖಾನ್, ಡಾ. ಯಾದವಾಡ, ದಾದಾಪೀರ ಕೆರೂರ, ಪ್ರೇಮಾ ರಾಠೋಡ, ರೇಣುಕಾ ನ್ಯಾಮಗೌಡರ, ಮಂಜುಳಾ ಭೂಸಾರೆ, ಮೈನುದ್ದಿನ ಖಾಜಿ, ಸುಭಾಸ್‌ಚಂದ್ರ ಘೋಡಕೆ, ಬಿಬಿಜಾನ ತಾಳಿಕೋಟಿ, ಎ ಆರ್ ಪಠಾಣ, ಡಿ ಎಫ್ ಹಾಜಿ ಮುಂತಾದವರು ದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...