ಬಾಗಲಕೋಟೆ | ಕುರಿಗಾರರು, ಪಶು ಪಾಲಕರ ರಕ್ಷಣೆಗೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಆಗ್ರಹ

Date:

Advertisements

ರಾಜ್ಯ ಕುರಿಗಾರರು ಮತ್ತು ಪಶು ಪಾಲಕರ ರಕ್ಷಣೆ-ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಬೇಕು ಎಂದು ರಾಜ್ಯ ಕುರಿಗಾರರ ಮತ್ತು ಪಶುಪಾಲಕರ  ಹಿತರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕ ಸರ್ಕಾರಕ್ಕೆ ಆಗ್ರಹಿಸಿದೆ.

ಸಮಿತಿಯ ಜಿಲ್ಲಾ ಸಂಚಾಲಕ ಯಲ್ಲಪ್ಪ ಹೆಗಡೆ ಸೋಮವಾರ(ಫೆ.12) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕುರಿಗಾರರಿಗೆ ರಕ್ಷಣೆ ಇಲ್ಲದಂತಾಗಿದೆ. ಅವರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಅತ್ಯಾಚಾರಗಳು ಸಹಿತ ನಡೆಯುತ್ತಿವೆ. ಈ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ಕಾಯ್ದೆಯನ್ನು ಜಾರಿಗೆ ತರವ ಅವಶ್ಯಕತೆ ಇದೆ ಎಂದರು.

ಕುರಿ ಮೇಯಿಸುತ್ತಿರುವಾಗ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದರು. ಸರ್ಕಾರವು ಎಲ್ಲಾ ವರ್ಗದ ಮಹಿಳೆಯರ, ಮಕ್ಕಳ, ಶೋಷಿತ ವರ್ಗದವರ ಹಿತ ರಕ್ಷಣೆಗೆ ವಿಶೇಷ ಕಾಯೆ ಗಳು ಜಾರಿ ಮಾಡಿದಂತೆ ಅದೇ ರೀತಿಯಾಗಿ ಕುರಿಗಾರರ ರಕ್ಷಣೆಗೆ ಕಾಯ್ದೆಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

Advertisements

ಕುರಿಗಾರರಿಕೆ ಮತ್ತು ಪಶು ಸಂಗೋಪನೆ ಮೇಲೆ ಜೀವನ ಸಾಗಿಸುತ್ತಿರುವ ಕುರಿಗಾರರು ಪಶುಪಾಲಕರ ಮೇಲೆ ಆಗುತ್ತಿ ರುವ ದೌರ್ಜನ್ಯ, ನಿಂದನೆ, ಕಳ ತನ, ಪ್ರಾಣಪಾಯ, ಅತ್ಯಾಚಾರ ಇತ್ಯಾದಿ ಕಡಿವಾಣಕ್ಕಾಗಿ ದೌರ್ಜನ್ಯ ತಡೆ ಕಾಯ್ದೆ ತರಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸಿದ್ದಪ್ಪ ಬಳಗಾನೂರ, ಪರ ಶುರಾಮ ಮಂಟೂರ, ಹುಸೇನಸಾಬ ಮಾಲಾದಾರ, ತಿಪ್ಪಣ್ಣ ಡಿ.ಕೆ, ಶಂಕ್ರಪ್ಪ ಶಾಸನ್ನವ‌ರ್, ಬಸಪ್ಪ ಆಡಗಲ್‌ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X