ಬಾಗಲಕೋಟೆ | ಹಿಡಕಲ್ ಜಲಾಶಯದಿಂದ ನೀರು ಹರಿಸಲು ರೈತರ ಒತ್ತಾಯ

Date:

Advertisements

ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ತುರ್ತಾಗಿ ನೀರು ಹರಿಸಲು ಕ್ರಮ ಜರುಗಿಸಲು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುದೋಳ ತಹಸೀಲ್ದಾರ ಕಛೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರರಗೆ ಮನವಿ ಸಲ್ಲಿಸಿದರು.

ಘಟಪ್ರಭಾ ನದಿಯು ಮುಧೋಳ ತಾಲೂಕಿನ ವ್ಯಾಪ್ತಿಯಲ್ಲಿ 20ರಿಂದ 25ದಿನಗಳಲ್ಲಿ ನೀರು ಖಾಲಿಯಾಗಿರುತ್ತದೆ. ಇದರಿಂದ ಮುಧೋಳ ಪಟ್ಟಣ ಒಳಗೊಂಡಂತೆ 30ಹಳ್ಳಿಗಳ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಕೃಷಿ ಚಟುವಟಿಕೆಗಳಿಗೂ ನೀರು ಇಲ್ಲದ ಕಾರಣ ಇತರೆ ಬೆಳೆಗಳು ಸಂಪೂರ್ಣ ಒಣಗುತ್ತಿವೆ.

ಇದಕ್ಕಾಗಿ ಡಿಸೆಂಬರ್ 11ರ ಸಲಹಾ ಮಂಡಳಿ ಸಭೆಯ ನಿರ್ಣಯದಂತೆ, ಪ್ರತೀ ತಿಂಗಳು  ಎರಡು ಟಿಎಮ್‌ಸಿ ನೀರು ಬೀಡುಗಡೆ ಆಗಬೇಕಾಗಿತ್ತು. ಆದರೆ, ಜನವರಿ ತಿಂಗಳ ನೀರು ಬಿಟ್ಟಿರುವುದಿಲ್ಲ ಆದ್ದರಿಂದ 29, ಜನವರಿ 2024ರಂದು ತಾಲೂಕು ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಕೊಟ್ಟಿದ್ದೇವೆ. ಆದರೆ, ಇಲ್ಲಿಯವರೆಗೂ ಘಟಪ್ರಭಾ ನದಿಗೆ ನೀರು ಬಂದಿಲ್ಲ ಎಂದು ರೈತರು ಹೇಳಿದ್ದಾರೆ.

Advertisements

ಕಾರಣ ಪ್ರಸಕ್ತ ವರ್ಷವೂ ಹಿಡಕಲ್ ಜಲಾಶಯದಲ್ಲಿ ಈವರೆಗೆ ದಿನಾಂಕ 08/02/2024ರಂದು 31 ಟಿಎಂಸಿ ನೀರು ಸಂಗ್ರಹವಿದೆ ನಮ್ಮ ಜಿಲ್ಲೆಗೆ ಪ್ರತೀ ತಿಂಗಳು 2 ಟಿಎಂಸಿ ನೀರು ಬರಬೇಕಾದಂತಹ ಘಟಪ್ರಭಾ ನದಿಗೆ ನೀರು ಬಂದಿಲ್ಲ. ಕೂಡಲೇ ಘಟಪ್ರಭಾ ನದಿಗೆ ಎರಡು ಟಿಎಂಸಿ ನೀರನ್ನು ಹರಿಸಬೇಕೆಂದು ರೈತರು ಆಗ್ರಹಿಸಿದರು.

ಇಲ್ಲದೇ ಇದ್ದರೆ ತಹಸೀಲ್ದಾರ್ ಕಚೇರಿ, ತಾಲೂಕಾ ಆಡಳಿತ ಭವನ ಮುಧೋಳದಲ್ಲಿ ಈಗಿನಿಂದಲೇ ಆಮರಣ ಸತ್ಯಾಗ್ರಹವನ್ನು ಮಾಡುತ್ತೇವೆ ಎಂದು ಎಚ್ಚರಿಸಿ, ದಯವಿಟ್ಟು ತುರ್ತುಕ್ರಮ ಕೈಗೊಂಡು ನೀರು ಬಿಡುಗಡೆಗೆ ಕ್ರಮ ವಹಿಸಬೇಕೆಂದು ರೈತರು ಮನವಿಯಲ್ಲಿ ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ರೈತ ಮುಖಂಡರು ವೆಂಕಪ್ಪ ನಾಯಕ್, ಪಿ.ಎಲ್. ಹೂಗಾರ, ಎಮ್.ಎಸ್. ಹಳೆಮನಿ, ಎಮ್‌.ಬಿ. ಮುರಗೋಳ ಹಾಗೂ ರೈತರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X