ಬಾಗಲಕೋಟೆ | ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಿ: ಕರವೇ ಶಿವರಾಮೇ ಗೌಡ ಬಣ ಆಗ್ರಹ

Date:

Advertisements

ನಾಡಿನ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಹಾಗೂ ಎಲ್ಲ ಅನುದಾನಿತ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ಇದರಿಂದ ನಾಡಿನ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇ ಗೌಡ ಬಣದ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ರಾಜ್ಯದ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಿದರು.

ಕರವೇ ಕಾರ್ಯಕರ್ತರೊಂದಿಗೆ ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ಪ್ರತಿಭಟನೆ ಮಾಡುವ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಅವರು ಮಾತನಾಡಿದರು.

ಕ ರ ವೇ ರಾಜ್ಯ ವಕ್ತಾರ ಬಿ.ಎಂ.ಪಾಟೀಲ ಮಾತನಾಡಿ, ಜಾಗತಿಕವಾಗಿ ವಿದ್ಯೆ ಉದ್ಯೋಗವನ್ನು ಪಡೆಯಲು ಇಂಗ್ಲಿಷ್ ಭಾಷೆಯ ಅವಶ್ಯಕತೆ ಇದೆ. ಕೌಶಲ್ಯ ಮತ್ತು ಇತರ ವೃತ್ತಿಪರ ತರಬೇತಿ ಗಳನ್ನು ಪಡೆಯಲು ಆಂಗ್ಲಭಾಷೆ ಬೇಕೇ ಬೇಕಾಗುತ್ತದೆ. ಆಂಗ್ಲಭಾಷೆಯನ್ನು ಕೇವಲ ವ್ಯವಹಾರಿಕವಾಗಿ ಮಾತ್ರ ಬಳಸಲು ಕಲಿಯಬೇಕಾಗಿದೆ ಎಂದರು.

ಕನ್ನಡವನ್ನು ಅನ್ನದ ಭಾಷೆಯಾಗಿ ತಪ್ಪದೇ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ರಾಜ್ಯ ಸರ್ಕಾರ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರತಿಯೊಬ್ಬ ವಿದ್ಯಾವಂತ ಮಕ್ಕಳಿಗೆ ಉದ್ಯೋಗದ ಅವಶ್ಯಕತೆ ಇದ್ದು ಕನ್ನಡ ಭಾಷೆಯಲ್ಲಿ ಉದ್ಯೋಗ ಪಡೆಯುವುದು ಕಷ್ಟದ ಕೆಲಸವಲ್ಲ. ಅನ್ಯ ಭಾಷೆಯ ಮೋಹಕ್ಕೆ ಬಲಿಯಾಗುವ ಅವಶ್ಯಕತೆ ನಮ್ಮ ನಾಡಿನ ಮಕ್ಕಳಿಗೆ ಬೇಕಾಗಿಲ್ಲ. ಆದ್ದರಿಂದ ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಬರಬೇಕು ಎಂದು ಹೇಳುವ ಮೂಲಕ ಅನ್ಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಹೋರಾಟಗಾರರ ಒತ್ತಾಯಕ್ಕೆ ಮಣಿದು ಅಲ್ಲಿನ ಸರ್ಕಾರಗಳು ದ್ವಿಭಾಷಾ ನೀತಿ ಅನುಸರಿಸಲು ಮುಂದಾಗಿದ್ದು, ನಮ್ಮನ್ನಾಳುವ ಕರ್ನಾಟಕ ಸರ್ಕಾರ ಈ ಕಾರ್ಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

ಪ್ರತಿಭಟನೆಯಲ್ಲಿ ಸಂತೋಷ ಚಿನಿವಾಲ, ಶರಣು ಗಾಣಿಗೇರ ಗಣೇಶ ನಾಯಕ, ಸಂಜು ಗೌಡರ, ವಿಷ್ಣು ಬಾರಕೇರ ಸಾದೀಕ್ ತಾಳಿಕೋಟಿ, ಮಂಜುಳಾ ಅಂಗಡಿ, ಕಸ್ತೂರಿ ಮೆಹರವಾಡೆ, ಶಬಾನಾ ಲಿಂಗಸೂರ, ಶ್ರೀನಿವಾಸ ಮಾರಾ, ಸೋಹೈಲ್ ಸುತಾರ, ಶಂಕರ ಕುರಿ, ನಿಂಬಯ್ಯ ಕುಲಕರ್ಣಿ, ಗುರುನಾಥ ಜಾವಡಗಿ, ಅಭಿಷೇಕ ಮಾದರ, ಪವನ್ ಶಿವಯೋಗಿ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X