ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

Date:

Advertisements

ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಜನರು ನೀರನ್ನು ತಂಪಾಗಿಡಲು ಮಣ್ಣಿನ ಪಾತ್ರೆಗಳ ಮೊರೆಹೋಗುತ್ತಿದ್ದಾರೆ.

ಪಟ್ಟಣದಲ್ಲಿ ಮಣ್ಣಿನ ಮಡಕೆಗಳ ವ್ಯಾಪಾರ ಜೋರಾಗಿದ್ದು, ಹಿಂದಿನ ವರ್ಷ ಮಾರ್ಚ್‌ನಲ್ಲಿ ಬೇಸಿಗೆಯ ಉರಿ ಆರಂಭವಾದರೆ, ಈ ಬಾರಿ ಮಳೆಯಾಗದೇ ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ ಜನರನ್ನು ಸುಡುತ್ತಿದೆ.

ಜಿಲ್ಲೆಯಲ್ಲಿ ಪ್ರತಿ ನಿತ್ಯ 35ರಿಂದ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಇನ್ನೂ ಬೇಸಿಗೆಯ ದಿನಗಳು ಆರಂಭವಾದರೆ ಈ ಧಗೆ ಇನ್ನೂ ಹೆಚ್ಚಾಗಬಹುದು ಎನ್ನುತ್ತಾರೆ ಸ್ಥಳೀಯರು. ಬಿಸಿಲಿನಿಂದಾಗಿ ಮಧ್ಯಾಹ್ನ 12 ಗಂಟೆ ನಂತರ ನಗರದ ರಸ್ತೆಯಲ್ಲಿ ಜನ ಸಂಚಾರ ದಿನೇ ದಿನೆ ವಿರಳವಾಗುತ್ತಿದೆ. ದೇಹವನ್ನು ತಂಪಾಗಿರಿಸಲು ಜನರು ತಂಪುಪಾನೀಯಗಳ ಮೊರೆಹೋಗುತ್ತಿದ್ದಾರೆ.

Advertisements

ಬೇಸಿಗೆಯಲ್ಲಿ ಮನೆಯಲ್ಲಿ ನೀರು ತಂಪಾಗಿರಿಸಲು ಮಾರುಕಟ್ಟೆಯಲ್ಲಿ ಮಣ್ಣಿನ ವಸ್ತುಗಳ ಮಾರಾಟ ಆರಂಭವಾಗಿದೆ. ಬಡವರ ಫ್ರಿಡ್ಜ್ ಎಂದು ಕರೆಸಿಕೊಳ್ಳುವ ಮಣ್ಣಿನ ಮಡಕೆ, ಹರವೆ ಮತ್ತು ಕೆಂಪು ಮಣ್ಣಿನ ಕೊಡಗಳಿಗೆ ಬೇಡಿಕೆ ಹೆಚ್ಚಾಗಿದೆ. ಮನೆಯಲ್ಲಿ ನೀರನ್ನು ತಂಪಾಗಿರಿಸಲು ಕೆಲವರು ಮಣ್ಣಿನ ಪಾತ್ರೆಗಳ ಖರೀದಿಗೆ ಮೊರೆಹೋಗಿದ್ದಾರೆ.

ಮಣ್ಣಿನ ಪಾತ್ರೆಗಳು ಮಾರಾಟವಾಗುತ್ತಿರುವುದರಿಂದ ಕುಂಬಾರರ ಮೊಗದಲ್ಲಿ ಕೊಂಚ ಸಂತಸ ಮೂಡಿದ್ದು, ಕಪ್ಪು ಮಣ್ಣಿನ ಹರವಿ 150ರೂ.ದಿಂದ 200 ರೂ.ಗೆ ಮಾರಾಟವಾಗುತ್ತಿವೆ. ಕೆಂಪು ಮಣ್ಣಿನ ಕೊಡ 250ರೂ.ಯಿಂದ 400ರೂ.ವರೆಗೂ ತನಕ ಮಾರಾಟವಾಗುತ್ತಿವೆ ಎನ್ನುತ್ತಿದ್ದಾರೆ ಕುಂಬಾರರು.

ಒಟ್ಟಿನಲ್ಲಿ ಬೇಸಿಗೆಯ ಬಿಸಿಗೆ ಸಾಕಾಗಿರುವ ಜನ ದೇಹವನ್ನು ತಂಪಾಗಿಡಲು ನಾನಾ ಮಾರ್ಗಗಳನ್ನು ಹುಡುಕುತ್ತಿದ್ದು, ಮಣ್ಣಿನ ಮಡಿಕೆಗಳಿಗೆ ಬೆಲೆಬಂದಿದೆ. ಇದು ಕುಂಬಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X