ಬಾಗಲಕೋಟೆ | ಕಾಳಗದ ಜಯಸಿಂಹ ಟಗರು ₹5 ಲಕ್ಷಕ್ಕೆ ಮಾರಾಟ; ಹುಬ್ಬೇರಿಸಿದ ನೆಟ್ಟಿಗರು!

Date:

Advertisements

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೆಗ್ಗಿ ಗ್ರಾಮದಲ್ಲಿ ಜಯಸಿಂಹ ಟಗರು ₹5 ಲಕ್ಷಕ್ಕೆ ಮಾರಾಟವಾಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದ್ದು, ಕಾಳಗಕ್ಕೆ ಬಳಸುವ ಟಗರು ಲಕ್ಷಾಂತರ ರೂಪಾಯಿಗೆ ಮಾರಾಟವಾಗುವುದು ಸಾಮಾನ್ಯ. ಆದರೆ ಐದು ಲಕ್ಷಕ್ಕೆ ಮಾರಾಟವಾಗಿದ್ದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ತೆಗ್ಗಿ ಗ್ರಾಮದ ಬಸವರಾಜ ಎಂಬುವರು ಮೂಲತಃ ಟಗರು ಸಾಕಾಣಿಕೆದಾರರು. ಎರಡು ವರ್ಷದ ಹಿಂದೆ ಒಂದು ಟಗರನ್ನು ₹90,000 ಕೊಟ್ಟು ಖರೀದಿ ಮಾಡಿದ್ದರು. ಇದೀಗ, ಈ ಟಗರನ್ನು ಧಾರವಾಡ ಮೂಲದ ಆರ್​ಎಕ್ಸ್​​ವೈ ಟಗರು ಪ್ರಿಯ ಗ್ರೂಪ್​ನವರು ಬರೋಬ್ಬರಿ ₹5 ಲಕ್ಷದ ₹1 ಸಾವಿರ ಕೊಟ್ಟು ಖರೀದಿಸಿದ್ದಾರೆ.

ಈ ಟಗರು ಯಾವುದೇ ಟಗರಿನ ಕಾಳಗದಲ್ಲಿ ಸೋಲನ್ನು ಕಾಣದೇ ಇರುವ ಧೀರ. ಹಾಗಾಗಿ ಇದರ ಮಾಲೀಕ ಬಸವರಾಜ ಇದಕ್ಕೆ ಪ್ರೀತಿಯಿಂದ ಜಯಸಿಂಹ ಎಂಬ ಹೆಸರು ಇಟ್ಟಿದ್ದು, ಜಯಶಾಲಿ ಜಯಸಿಂಹ ಟಗರು ಈವರೆಗೂ 50ಕೂ ಹೆಚ್ಚು ಟಗರಿನ ಬಡಿದಾಟದಲ್ಲಿ ಬಹುಮಾನವನ್ನು ಪಡೆದಿದೆ. ಅಲ್ಲದೆ ₹6 ಲಕ್ಷಕ್ಕೂ ಅಧಿಕ ಹಣ, ಬೈಕ್ ಹಾಗೂ ಇನ್ನಿತರ ಬಹುಮಾನಗಳನ್ನು ಮಾಲೀಕ ಬಸವರಾಜನಿಗೆ ತಂದು ಕೊಟ್ಟಿದೆ.

Advertisements

ಈ ಸುದ್ದಿ ಓದಿದ್ದೀರಾ? ಗುಬ್ಬಿ |  ಉಪಲೋಕಾಯುಕ್ತರೆದುರೇ ಭಿಕ್ಷೆ ಬೇಡಿದ ವಿಶೇಷ ಚೇತನ ವೃದ್ದೆ

ಇದೀಗ, ಧಾರವಾಡ ಮೂಲದ ಆರ್​ಎಕ್ಸ್​ವೈ ಎಂಬ ಗ್ರೂಪ್​ನವರು ಬರೋಬ್ಬರಿ ₹5 ಲಕ್ಷ ಕೊಟ್ಟು ಈ ಜಯಸಿಂಹ ಟಗರನ್ನು ತಮ್ಮದಾಗಿಸಿಕೊಂಡಿದ್ದಾರೆ. ಜಯಸಿಂಹ ಇಷ್ಟು ದುಡ್ಡಿಗೆ ಮಾರಾಟವಾಗಿದ್ದನ್ನು ಕಂಡು ಟಗರು ಪ್ರಿಯರು ಭಲೇ ಮೈಲಾರಿ ಎನ್ನುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X