ಬಾಗಲಕೋಟೆ | ಸಾರ್ವಜನಿಕ ಸೌಲಭ್ಯಕ್ಕೆ ಮೀಸಲಿಟ್ಟ ಜಾಗಗಳ ಅತಿಕ್ರಮಣ ತೆರವಿಗೆ ಕರವೇ ಮನವಿ

Date:

Advertisements

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಉದ್ಯಾನ ಹಾಗೂ ಸಾರ್ವಜನಿಕ ಸೌಲಭ್ಯಕ್ಕಾಗಿ ಮೀಸಲಿಟ್ಟ ಜಾಗಗಳು ಕೆಲ ಪ್ರಭಾವಿಗಳ ಪಾಲಾಗುತ್ತಿದ್ದು, ಕೂಡಲೇ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕ ಆಸ್ತಿ ರಕ್ಷಣೆಗೆ ಪಟ್ಟಣ ಪಂಚಾಯಿತಿ ಮುಂದಾಗಬೇಕು ಎಂದು ಕರವೇ ಕಾರ್ಯಕರ್ತರು ಪಟ್ಟಣ ಪಂಚಾಯತ್‌ ಎದುರು ಪ್ರತಿಭಟನೆ ಮಾಡಿ ಬಳಿಕ ಪಂಚಾಯತಿ ಮುಖ್ಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, “ನಾಗರಿಕ ಸೌಲಭ್ಯ ಹಾಗೂ ಉದ್ಯಾನವನ ಜಾಗಗಳು ಪ್ರಭಾವಿಗಳ ಪಾಲಾಗಿವೆ. ಬಡಾವಣೆಯನ್ನು ಎನ್‌ಎ ಮಾಡುವಾಗ ಅಲ್ಲಿನ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಕಲ್ಪಿಸಲು ಕೆಲ ಜಾಗಗಳನ್ನು ಮೀಸಲಿಡಲಾಗುತ್ತದೆ. ಆದರೆ, ಸಾರ್ವಜನಿಕ ಆಸ್ತಿಯನ್ನು ಕೆಲವರು ಕಬಳಿಸಿದ್ದಾರೆ. ಭೂಮಾಫಿಯಾಗೆ ಕೆಲ ಅಧಿಕಾರಿಗಳು ಬೆಂಬಲವಾಗಿ ನಿಂತಂತೆ ಕಾಣುತ್ತಿದೆ” ಎಂದು ಆರೋಪಿಸಿದರು.

“ಯಾರದೇ ಪ್ರಭಾವಕ್ಕೂ ಒಳಗಾಗದೆ ಅತಿಕ್ರಮಣ ಮಾಡಿದ ಸಾರ್ವಜನಿಕ ಆಸ್ತಿಯನ್ನು ತೆರವುಗೊಳಿಸಬೇಕು. ಒಂದು ವೇಳೆ 15 ದಿನದಲ್ಲಿ ಕಾರ್ಯಾಚರಣೆ ನಡೆಸದಿದ್ದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಉಡುಪಿ | ದಿವ್ಯಾಂಗರ ಪ್ರತಿಭೆಗಳಿಗೆ ಪ್ರೋತ್ಸಾಹವಿದ್ದಲ್ಲಿ ಉತ್ತಮ ಸಾಧನೆ ಸಾಧ್ಯ – ಬಿಷಪ್ ಜೆರಾಲ್ಡ್ ಲೋಬೊ

ಹುನಗುಂದ ಮತಕ್ಷೇತ್ರದ ಕರವೇ ಅಧ್ಯಕ್ಷ ರಂಝಾನ್‌ ನದಾಫ್, ಇಳಕಲ್ ಘಟಕದ ಅಧ್ಯಕ್ಷ ಮಹಾಂತೇಶ ವಂಕಲ ಕುಂಟಿ, ಹುನಗುಂದ ಘಟಕದ ರೋಹಿತ ಬಾರಕೇರ, ಕಾರ್ಮಿಕ ಘಟಕದ ಅಧ್ಯಕ್ಷ ಸೈಯದ್ ಬೇಪಾರಿ, ಸಂಗು ಗ್ವಾತಗಿ, ಅಶೋಕ ಪೂಜಾರಿ, ಬಸವರಾಜ ಅಂಬಿಗೇರ, ಚಂದ್ರು ಹಳ್ಳಿ, ಶರಣಪ್ಪ ಹುಗ್ಗೆನ್ನವರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X