ಬಾಗಲಕೋಟೆ | ಮಹರ್ಷಿ ವಾಲ್ಮೀಕಿ ಜಯಂತಿ

Date:

Advertisements

ಮಹರ್ಷಿ ವಾಲ್ಮೀಕಿಯವರು ರಚಿಸಿರುವ ಶ್ರೀರಾಮಚಂದ್ರನ ಮಹಾಕಾವ್ಯ ರಾಮಾಯಣದಲ್ಲಿ ಮನುಕುಲಕ್ಕೆ ಒಳ್ಳೆಯದಾಗುವ ತತ್ವ ಸಿದ್ಧಾಂತಗಳು ಅಡಗಿವೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ, ಹುನಗುಂದ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಮುಂದಿನ ದಿನಮಾನಗಳಲ್ಲಿ ವಾಲ್ಮೀಕಿ ದೇವಸ್ಥಾನಕ್ಕೆ ಮೂರ್ತಿ ಪ್ರತಿಷ್ಠಾಪನೆ ಮತ್ತು ವೃತ್ತ ಉದ್ಘಾಟಿಸುವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುಚುದು. ಯಾವುದೇ ಸಮಾಜ ಒಗ್ಗಟ್ಟಾಗಿದ್ದಾಗ ಸರ್ಕಾರದ ಸವಲತ್ತುಗಳು ಮತ್ತು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ. ಸಮಾಜದ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲಾಗುವುದು” ಎಂದು ಭರವಸೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಾಪುರುಷರ ಜಯಂತಿ ಆಚರಣೆ ಜತೆಗೆ, ಮೌಲ್ಯಗಳನ್ನೂ ಮೈಗೂಡಿಸಿಕೊಳ್ಳಬೇಕು: ತಹಶೀಲ್ದಾರ್ ಬಿ ಎಸ್ ಕಡಕಬಾವಿ

ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಗುರುಮಹಾಂತ ಮಹಾ ಸ್ವಾಮಿಗಳು ತಮ್ಮ ಆಶೀರ್ವಚನದಲ್ಲಿ ನಂಬಿಕೆ, ಶೂರರು, ಸಮಾಜ ನಿಷ್ಠಾವಂತರು ಪ್ರಾಮಾಣಿಕತೆಗೆ ಹೆಸರುವಾಸಿಯಾದವರು ವಾಲ್ಮೀಕಿ ಜನಾಂಗದವರು ಎಂದರು.

ಇದೇ ಸಂದರ್ಭದಲ್ಲಿ ಪೂಜ್ಯ ಗುರುಮಹಾಂತ ಸ್ವಾಮಿಗಳು, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ ನಗರಸಭೆ ಸದಸ್ಯರಾದ ಹನಮಂತ ತುಂಬದ, ನಜ್ಜಾಬೇಗಂ ಬನ್ನಿಗೋಳ, ಶರಣಪ್ಪ ಅಮರಾವತಿ, ಮಲ್ಲೇಶ ಮಡಿವಾಳರ, ಇಳಕಲ್ ತಹಶೀಲ್ದಾರ್ ಎಸ್‌ ಬಿ ಕೂಡಲಗಿ, ವಾಲ್ಮೀಕಿ ಪೀಠದ ಧರ್ಮದರ್ಶಿ ಶಾಂತಕುಮಾರ ಸುರಪುರ, ಶರಣಪ್ಪ ಆಮದಿಹಾಳ, ಗಿಡ್ಡಪ್ಪ ಗಾಣದಾಳ, ಗುಂಡಪ್ಪಗೌಡ ಕರಡಿ, ವೆಂಕಣ್ಣ ತಪ್ಪಲದಡ್ಡಿ, ಸಮಾಜ ಸೇವಕ ವಿಠಲ ಜಕ್ಕಾ ಮೊದಲಾದವರನ್ನು ಗೌರವಿಸಿ ಸನ್ಮಾನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X