ಬಾಗಲಕೋಟೆ | ಕೈಕೊಟ್ಟ ಮುಂಗಾರು; ಹಳ್ಳಿಯನ್ನೇ ತೊರೆದ ಗ್ರಾಮಸ್ಥರು

Date:

Advertisements

ತಡವಾಗಿ ಮಾನ್ಸೂನ್ ಮಾರುತಗಳು ರಾಜ್ಯ ಪ್ರವೇಶಿಸಿವೆ. ಆದರೂ, ಮಳೆ ಕಣ್ಮರೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಹನಿ ಇನ್ನೂ ಭೂಮಿಗೆ ಬಿದ್ದಿಲ್ಲ. ಹೀಗಾಗಿ, ಮಳೆ ಆಧಾರಿತ ಕೃಷಿಯನ್ನೇ ನಂಬಿದ್ದ ಜನರು ಬರದ ಆತಂಕದಲ್ಲಿದ್ದಾರೆ. ಕೂಲಿ ಕೆಲಸ ಹರಸಿ ಊರನ್ನೇ ತೊರೆಯುತ್ತಿದ್ದಾರೆ.

ಇಂಥದೊಂದು ಸನ್ನಿವೇಶಕ್ಕೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲ್ಲೂಕಿನ ಲಿಂಗಾಪುರ ಗ್ರಾಮ ಸಾಕ್ಷಿಯಾಗಿದೆ. ಗ್ರಾಮದ ದುಡಿಯುವ ವಯಸ್ಸಿನ ಪುರುಷರು-ಮಹಿಳೆಯರು ಉದ್ಯೋಗ ಹರಸಿ ನಗರಗಳತ್ತ ಗುಳೆ ಹೋಗುತ್ತಿದ್ದಾರೆ. ವೃದ್ಧರಷ್ಟೇ ಗ್ರಾಮದಲ್ಲಿ ಕಾಣಸಿಗುತ್ತಿದ್ದಾರೆ.

ಗ್ರಾಮದಲ್ಲಿ 300ಕ್ಕೂ ಅಧಿಕ‌ ಮನೆಗಳಿದ್ದು, ಸುಮಾರು 2,000 ಜನಸಂಖ್ಯೆಯಿದೆ. ಗ್ರಾಮದ ಬಹುತೇಕರು ರೈತರು ಮತ್ತು ಕೃಷಿ ಕಾರ್ಮಿಕರು. ನೀರಾವರಿ ಸೌಲಭ್ಯವಿಲ್ಲದ ಗ್ರಾಮದಲ್ಲಿ ಕೃಷಿಗೆ ಮಳೆ ನೀರೇ ಆಧಾರ. ಆದರೆ, ಈ ವರ್ಷ ಗ್ರಾಮದಲ್ಲಿ ಮಳೆ ಸುರಿದಿಲ್ಲ. ಕೃಷಿ ಮಾಡಲು ನೀರಿಲ್ಲದ ಕಾರಣ, ಮುಂಗಾರು ಬಿತ್ತನೆ ಆರಂಭವೇ ಆಗಿಲ್ಲ. ಇನ್ನು, ಮನರೇಗಾ ಅಡಿಯಲ್ಲಿಯೂ ಸರಿಯಾಗಿ ಕೂಲಿ ಕೆಲಸ ಸಿಗದೆ ಬೇಸತ್ತಿರುವ ಗ್ರಾಮದ ಜನರು ತಮ್ಮ ಮನೆಗಳಿಗೆ ಬೀಗ ಜಡಿದು, ನಗರಗಳತ್ತ ಮುಖ ಮಾಡಿದ್ದಾರೆ.

Advertisements

ಈಗಾಗಲೇ ಗ್ರಾಮದ 80% ಮಂದಿ ಊರು ತೊರೆದಿದ್ದಾರೆ. ಹಿರಿಯ ಜೀವಗಳು ಊರಿನಲ್ಲಿವೆ. ಅವರೊಂದಿಗೆ ಒಂದಷ್ಟು ಮಂದಿ ಪ್ರಾಯದವರಿದ್ದಾರೆ. ಒಬ್ಬನೇ ಒಬ್ಬ ಯುವಕನೂ ಗ್ರಾಮದಲ್ಲಿ ಕಾಣ ಸಿಗುವುದಿಲ್ಲವೆಂದು ಟಿವಿ9 ವರದಿ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X