ಬಾಗಲಕೋಟೆ | ಜ್ವಲಂತ ಸಮಸ್ಯೆಗಳ ವಿರುದ್ಧ ಪಕ್ಷಾತೀತ ಜಾಥಾ; ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ರೈತ ನಾಯಕರ ಕರೆ

Date:

Advertisements

ಕರ್ನಾಟಕ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನ ಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಸರಕಾರದ ಗಮನಕ್ಕೆ ತರಲು ಪಕ್ಷಾತೀತ ಹಾಗೂ ಜ್ಯಾತ್ಯತೀತವಾಗಿ, ಸರ್ವಧರ್ಮದ ಸರ್ವರು ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಹಮ್ಮಿಕೊಂಡು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ರೈತ ಮುಖಂಡ ಮುತ್ತಪ್ಪ ಕುಮಾರ ಕರೆ ಕೊಟ್ಟರು.

ಬಾಗಲಕೋಟೆ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ ಅಭಿವೃದ್ಧಿಯತ್ತ ಯುವ ಜನರ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ ಮೂಲಕ ಯುವಜನರ ಹಾಗೂ ರೈತರ ಏಳಿಗೆಯೇ ರಾಜ್ಯದ ಏಳಿಗೆ ಎಂದು ಕರ್ನಾಟಕ ರಾಜ್ಯ ಸರಕಾರಕ್ಕೆ ಮನವರಿಕೆ ಮಾಡಲು ಬೀದರದಿಂದ ಬೆಂಗಳೂರು ವಿಧಾನಸೌಧದವರೆಗೂ 1200 ಕಿ.ಮೀ ಯುವ ಪರಿವರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಎಲ್ಲ ಜಿಲ್ಲೆಯ ಯುವ ಜನತೆ, ಮುಖಂಡರು, ಸಾರ್ವಜನಿಕರು ಹಾಗೂ ಮಾಧ್ಯಮ ಮಿತ್ರರು ಯುವ ಪರಿವರ್ತನೆ ಯಾತ್ರೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಯಲ್ಲಪ ಹೆಗಡೆ, ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ, ಯಾತ್ರೆಯ ಸಂಚಾಲಕ ಶಿವಲಿಂಗೇಶ್ವರ ನಿಂಗನೂರ, ಭೀಮ ಆರ್ಮಿ ಭಾರತ ಏಕತಾ ಮಿಷನ್ ಮುಧೋಳ ತಾಲ್ಲೂಕು ಘಟಕದ ಅಧ್ಯಕ್ಷ ಶೇಖರ್ ಕಾಂಬಳೆ, ಸಂಚಾಲಕ ಆಸ್ಕರ್ ಸರಕಾವಸ್, ಪರಶು ನಾಯಿಕರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X