ಬಾಗಲಕೋಟೆ | ಸಕ್ಕರೆ ಕಾರ್ಖಾನೆಗಳ ತೂಕ ಮೋಸ ತಡೆಗೆ ಮುನ್ನೆಚ್ಚರಿಕೆ; 15ಕ್ಕೂ ಹೆಚ್ಚು ಯಂತ್ರಗಳ ಸಿದ್ಧತೆ

Date:

Advertisements

ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಪೂರೈಸುವಾಗ ತೂಕದಲ್ಲಿ ಮೋಸವಾಗುತ್ತದೆಂಬ ಆರೋಪ ಮಾಡುವ ಮುನ್ನ ದೂರು ನೀಡಿದರೆ ಕೂಡಲೇ ತೂಕದ ಯಂತ್ರ ತರಿಸಿ ಅಳವಡಿಸಿಕೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಈಗಾಗಲೇ 15ಕ್ಕೂ ಹೆಚ್ಚು ತೂಕದ ಯಂತ್ರಗಳನ್ನು ತರಿಸಿ ಇಡಲಾಗಿದೆ. ರೈತರು ದೂರು ಕೊಡಲು ಮುಂದೆ ಬರುತ್ತಿಲ್ಲವೆಂದು ವಿಷಾದ ವ್ಯಕ್ತಪಡಿಸಿದ್ದು, ಖಾಸಗಿ ಸಕ್ಕರೆ ಕಾರ್ಖಾನೆಗಳ ಪೈಪೋಟಿ ಮಧ್ಯೆಯೂ ಸಹಕಾರಿ ಸಂಘದ ಸಕ್ಕರೆ ಕಾರ್ಖಾನೆಯೂ ಎಲ್ಲವನ್ನು ಸರಿಪಡಿಸಿಕೊಂಡು ಕಬ್ಬಿನ ಹಂಗಾಮ ಮುಂದುವರಿಸಬೇಕಾಗಿದೆ” ಎಂದರು.

Advertisements

“ಉತ್ತರ ಕರ್ನಾಟಕದಿಂದಲೇ ಅತಿ ಹೆಚ್ಚು ಕಬ್ಬು ನುರಿಸಲಾಗುತ್ತಿದೆ. ಒಂದೇ ಜಿಲ್ಲೆ ಒಂದು ತಾಲೂಕಿನ ಸಕ್ಕರೆ ಕಾರ್ಖಾನೆಗಳಿದ್ದರೂ ರಿಕವರಿ ಮಾತ್ರ ಬೇರೆ ಬೇರೆಯಾಗುತ್ತದೆ. ಭೂಮಿ, ನೀರು ಒಂದೇ ಇದ್ದಾಗ ರಿಕವರಿ ಬೇರೆ ಯಾಕೆಂಬ ಜಿಜ್ಞಾಸೆ ಎದುರಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನೆರೆ ಹಾವಳಿಗೆ ನಾಶವಾದ ಮನೆಗಳು; ನೈಜ ಫಲಾನುಭವಿಗಳಿಗಿಲ್ಲ ಆಶ್ರಯ

“ಕಬ್ಬು ಪೂರೈಸಿದ ರೈತರ ಕಬ್ಬಿನ ಬೆಳೆಗೆ 9, 10, 11 ರಿಕವರಿ ಬಂದಾಗ ಗೊಂದಲಕ್ಕೆ ಈಡಾಗುತ್ತಿದ್ದಾನೆ. ಇದನ್ನು ಕಾರ್ಖಾನೆಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ಕಬ್ಬು ನೀಡುತ್ತಿರುವುದರಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಭಾರತ ದೇಶದಲ್ಲಿಯೇ ಉತ್ತರ ಕರ್ನಾಟಕದ ಸರ್ಕಾರ ಕಾರ್ಖಾನೆಗಳು ಸಕ್ಕರೆ ಧಾರಣೆ ನೀಡುತ್ತವೆ. ರೈತರು, ಕಾರ್ಮಿಕರ ಸಹಕಾರ ಬೇಕು. ಮಾಲೀಕರಲ್ಲಿ ಹೃದಯ ವೈಶಾಲ್ಯತೆ ಇದ್ದಾಗಲೇ ಬೆಲೆ ಸಿಗಲು ಸಾಧ್ಯವಿದೆ” ಎಂದರು.

“ಸಹಕಾರ ರಂಗದಲ್ಲಿ ಕೆಲವರು ನಿರ್ದೇಶಕರಾಗಿ ಸ್ವಂತ ಸಕ್ಕರೆ ಕಾರ್ಖಾನೆ ಆರಂಭಿಸಿರುವ ದಾಖಲೆಗಳಿವೆ. ಅವಳಿ ಜಿಲ್ಲೆಯಲ್ಲಿ 1997ರಿಂದ ಡಿಸಿಸಿ ಬ್ಯಾಂಕ್‌ನಿಂದ ರಾಜ್ಯದ 27 ಸಕ್ಕರೆ ಕಾರ್ಖಾನೆಗಳಿಗೆ ಸಾಲ ಕೊಟ್ಟಿದ್ದೇವೆ. ಸಹಕಾರ ರಂಗದ ಮೂಲಕ ಸಕ್ಕರೆ ಕಾರ್ಖಾನೆಗಳಿಗೆ ಶಕ್ತಿ ಬಂದಂತಾಗಿದೆ” ಎಂದು ಸಚಿವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X