ಬಾಗಲಕೋಟೆ | ಕುರಿಗಾಹಿ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ

Date:

Advertisements

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯ ಕುರಿಗಾರರು ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ಕೊಲೆ ಮಾಡಿರುವ ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ರಾಜ್ಯಾದ್ಯಂತ ರೈತ ಸಮುದಾಯ ಹಾಗೂ ಹಿಂದುಳಿದ ವರ್ಗದವರು ಕುರಿಗಾರಿಕೆ ಮತ್ತು ಪಶುಸಂಗೋಪನೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿ ನಿಭಾಯಿಸುತ್ತಾರೆ. ಅಂತಹ ಕುಟುಂಬಗಳಿಗೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದರು.

“ಕುರಿಗಾಹಿಗಳು ಬೆಟ್ಟ ಗುಡ್ಡಗಳಲ್ಲಿ ಸಂಚರಿಸುತ್ತಾರೆ. ಹೊಲಗಳಲ್ಲಿಯೇ ತಿಂಗಳಗಟ್ಟಲೆ ವಾಸ್ತವ್ಯ ಮಾಡುತ್ತಾರೆ. ಅಂತಹವರ ರಕ್ಷಣೆಗೆ ಸರ್ಕಾರ ಹಿತರಕ್ಷಣಾ ಕಾಯ್ದೆ ಜಾರಿಗೆ ತರಬೇಕು. ಶರಣಪ್ಪ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು” ಎಂದು ಮನವಿ ಮಾಡಿಕೊಂಡರು.

Advertisements
WhatsApp Image 2025 03 13 at 11.54.45 AM 2

ಯಲ್ಲಪ್ಪ ಹೆಗಡೆ ಮಾತನಾಡಿ, “ಕುರಿ ಕಾಯುವವರಿಗೆ ಭದ್ರತೆ, ರಕ್ಷಣೆ ಇಲ್ಲವಾಗಿದೆ. ಒಂದೇ ಸಮುದಾಯದವರು ಕುರಿ, ದನ ಕಾಯುವುದಿಲ್ಲ, ಕುರಿ ಕಾಯುವವರ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಕುರಿಗಾಹಿಗಳ ಹಿತರಕ್ಷಣಾ ಕಾಯಿದೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಈ ಹಿಂದೆ ಬಜೆಟ್‌ನಲ್ಲಿ ಭರವಸೆ ನೀಡಿದ್ದರು. ಈಗ ಮರೆತಿದ್ದಾರೆ. ಕೂಡಲೇ ಜಾರಿಗೊಳಿಸಬೇಕು” ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಬಾಗಲಕೋಟೆ | ನೀರಿಗಾಗಿ ಜನರ ಪರದಾಟ; ಶಾಶ್ವತ ಪರಿಹಾರಕ್ಕೆ ವೆಲ್ಫೇರ್‌ ಪಾರ್ಟಿ ಮನವಿ

ಈ ಸಂದರ್ಭದಲ್ಲಿ ರಾಜ್ಯ ಕುರಿಗಾರರ ಮತ್ತು ಪಶು ಪಾಲಕರ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪರಶುರಾಮ ಮಂಟೂರ, ಅಧ್ಯಕ್ಷ ಸಿದ್ದಪ್ಪ ಬಳಗಾನೂರ, ಮಲ್ಲು ವಡಗೇರ, ಶಿವಲಿಂಗ ಪೂಜಾರಿ, ಬಸವರಾಜ ತೆಲಗಿ, ಶಿವು ಕುರಿ, ರಾಮು, ಶಿವರಾಜ ರಾಕುಂಪಿ, ರಾಜಭಕ್ಷಿ, ಕಾಸಿಮ ಗೋಳಸಂಗಿ, ಇಮಾಮ್ ಹುಸೇನ್, ಶಿವಕುಮಾರ ಪೂಜಾರಿ, ನಿಂಗಪ್ಪ ಜೋಗಿ, ವಿಠಲ ದಂದರಿಂಗಿ ಶೇಖರ್ ಕಾಂಬಳೆ ರಾಜು ಮಣ್ಣಿಕೆರೆ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X