ಬಾಗಲಕೋಟೆ | ಫೆ.22ರಿಂದ ರನ್ನ ವೈಭವೋತ್ಸವ: ಅರ್ಥಪೂರ್ಣ ಆಚರಣೆಗೆ ಭರದ ಸಿದ್ಧತೆ

Date:

Advertisements

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ರನ್ನ ವೈಭವೋತ್ಸವ ಆಯೋಜನೆಗೆ ಭರದ ಸಿದ್ಧತೆ ನಡೆದಿದ್ದು, ಮೂರು ದಿನಗಳ ಕಾಲ ಅರ್ಥಪೂರ್ಣವಾಗಿ ಉತ್ಸವ ನಡೆಸಲು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎಂ ಜಾನಕಿ ತಿಳಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಫೆ.22 ರಿಂದ 24 ರವರೆಗೆ ಉತ್ಸವ ನಡೆಯಲಿದ್ದು, ಮೊದಲ ದಿನ ಬೆಳಗಲಿಯಲ್ಲಿ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ಇನ್ನೆರಡು ದಿನ ಮುಧೋಳದ ರನ್ನ ಕ್ರೀಡಾಂಗಣದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಕ್ರೀಡಾಂಗಣ ಹಾಗೂ ಅಂಬೇಡ್ಕರ್ ಭವನದಲ್ಲಿ ಎರಡು ವೇದಿಕೆಗಳನ್ನು ಸಜ್ಜುಗೊಳಿಸಲಾಗಿದ್ದು, ಬೆಳಗ್ಗೆ 11 ರಿಂದ ಕಾರ್ಯಕ್ರಮಗಳು ಶುರುವಾಗಲಿವೆ” ಎಂದು ಮಾಹಿತಿ ಹಂಚಿಕೊಂಡರು.

“ಫೆ.22 ರಂದು ಕಾನೂನು ಖಾತೆ ಸಚಿವ ಎಚ್ ಕೆ ಪಾಟೀಲ್ ಉತ್ಸವ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ, ಸಚಿವರಾದ ಎಚ್ ಸಿ ಮಹಾದೇವಪ್ಪ, ಶಿವಾನಂದ ಪಾಟೀಲ, ಪ್ರಿಯಾಂಕ್ ಖರ್ಗೆ, ಎಸ್ ಎಸ್ ಮಲ್ಲಿಕಾರ್ಜುನ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ಯಶವಂತರಾಯಗೌಡ ಪಾಟೀಲ ಹಾಗೂ ಲಕ್ಷ್ಮಣ ಸವದಿ ವಿಶೇಷ ಆಹ್ವಾನಿತರಾಗಿ ಉತ್ಸವಕ್ಕೆ ಆಗಮಿಸಲಿದ್ದಾರೆ. ರನ್ನ ಬೆಳಗಲಿಯಲ್ಲಿ 50 ಕಲಾ ತಂಡಗಳ ಕುಂಭಮೇಳ ಮೆರವಣಿಗೆ ನಡೆಯಲಿದೆ. ಅಲ್ಲದೆ ಮುಧೋಳದ ರನ್ನ ಭವನದಲ್ಲಿ ರನ್ನ ಕಾವ್ಯ ದರ್ಶನ ವಿಚಾರ ಸಂಕೀರ್ಣ ನಡೆಯಲಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ?:ಬಾಗಲಕೋಟೆ | ಅತಿಕ್ರಮವಾಗಿ ನಿರ್ಮಿಸಿರುವ ಗ್ರಾನೈಟ್ ಫ್ಯಾಕ್ಟರಿ ತೆರವಿಗೆ ಕರವೇ ಆಗ್ರಹ

ಫೆ.23 ರಂದು ಬೆಳಗ್ಗೆ 10 ಗಂಟೆಗೆ ಮುಧೋಳದಲ್ಲಿ ಜನಪದ ಕಲಾ ವಾಹಿನಿಗಳ ಮೆರವಣಿಗೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ವಿಚಾರಗೋಷ್ಠಿ ಇರಲಿದೆ. ಸಂಜೆ 6ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನ ಹಳೆಗನ್ನಡ ಪ್ರಶಸ್ತಿ ವಿತರಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವರಾದ ರಾಮಲಿಂಗಾರೆಡ್ಡಿ, ಡಿ ಸುಧಾಕರ, ಬಿ ಎಸ್ ಸುರೇಶ್ ಭಾಗವಹಿಸಲಿದ್ದಾರೆ. ಫೆ.24 ರಂದು ಬೆಳಗ್ಗೆ 10:30ಕ್ಕೆ ಕವಿಗೋಷ್ಠಿಇರಲಿದೆ. ವಿಧಾನಸಭಾ ಅಧ್ಯಕ್ಷ ಯುಟಿ ಖಾದರ್, ಸಚಿವರಾದ ಎಂಬಿ ಪಾಟೀಲ, ಸಂತೋಷ ಲಾಡ್, ಸತೀಶ ಜಾರಕಿಹೊಳಿ, ಶಾಸಕ ವಿನಯ ಕುಲಕರ್ಣಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X